ಪೊಲೀಸಪ್ಪನ 97 ಲಕ್ಷ ರೂ ಕದ್ದ ಕಾರ್ ಡ್ರೈವರ್, ತಕ್ಷಣ ಬೆನ್ನಟ್ಟಿದ ಪೊಲೀಸರು, ಏನಾಯ್ತು ನೋಡಿ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಸಿನಿಮಾ ದೃಶ್ಯವನ್ನು ಹೋಲಿಸುವಂತಿತ್ತು. ಬಾಡಿಗೆ ಕಾರು ಚಾಲಕನು ಕಾರಿನಲ್ಲಿದ್ದ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ ಆದರೆ ಚಳ್ಳಕೆರೆ ಪೊಲೀಸರು ತಕ್ಷಣ ಬೆನ್ನಟ್ಟಿ ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ವಂಚನೆಗೆ ಗುರಿಯಾದ ನಿವೃತ್ತ ಎಸ್ಪಿ ಗುರುಪ್ರಸಾದ್ ಬೆಂಗಳೂರು ಮೂಲದ ನಿವೃತ್ತ ಸಿಬಿಐ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿ ಲಲಿತಾ ಜೊತೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ಕುಟುಂಬದ ಜಮೀನು ಮಾರಾಟ ಮಾಡಿಕೊಂಡು ಸುಮಾರು 97 ಲಕ್ಷ […]

Continue Reading

ಕಲ್ಯಾಣ ಮಂಟಪಗಳಲ್ಲಿ ಕದ್ದ ಹಣದಲ್ಲಿ 3 ಸೈಟ್ ಖರೀದಿಸಿ,1 ಮನೆ ಕಟ್ಟಿದ ಖದೀಮ ಅಂದರ್

ಬೆಂಗಳೂರು: ಈತ ಟಿಪ್‌ಟಾಪ್‌ ಆಗಿ ಕಲ್ಯಾಣ ಮಂಟಪಕ್ಕೆ ಕಾಲಿಟ್ಟನೆಂದರೆ ಅಲ್ಲಿ ವಧು-ವರರ ಕುಟುಂಬಕ್ಕೆ ಸೇರಿದವರ ಚಿನ್ನಾಭರಣ, ನಗದು ಮಂಗಮಾಯವಾಗುವದು ಗ್ಯಾರಂಟಿ ಇತ್ತು, ಹೀಗಾಗಿಯೇ ಮದುವೆ ಮನೆಯಲ್ಲಿ ಕದ್ದ ಚಿನ್ನಾಭರಣಗಳಿಂದ 3 ನಿವೇಶನ ಖರೀದಿಸಿ, ವಾಸಿಸಲು ಸ್ವಂತ ಮನೆಕಟ್ಟಿಕೊಂಡು ಹೆಂಡತಿ-ಮಕ್ಕಳ ಜೊತೆಗೆ ಸಂಸಾರ ಮಾಡಿಕೊಂಡಿದ್ದ ವೃತ್ತಿಪರ ಖದೀಮನೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ನಿವಾಸಿ ಪರಮೇಶ್ ಈ ಖತರ್‌ನಾಕ್‌ ಕಳ್ಳ. ಕಲ್ಯಾಣ ಮಂಟಪಗಳಿಗೆ ಅತಿಥಿಯ ಸೋಗಿನಲ್ಲಿ ತೆರಳಿ ವಧು-ವರರ ಕೊಠಡಿಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ ಈ ಚಾಲಾಕಿ […]

Continue Reading

ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ ?

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೆಯಾದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದೆಯಾದ ಕಥೆಗಳಿದ್ದು, ಗಣೇಶ ಹಬ್ಬಕ್ಕೂ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದು ಎಂದು ಅನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೆವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ […]

Continue Reading

ನಾಲವಾರ: ಆ.28 ರಂದು ಶ್ರಾವಣ ಮಾಸದ ಮುಕ್ತಾಯ ಸಮಾರಂಭ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದಲ್ಲಿ ಆಗಸ್ಟ್ 28 ರಂದು ಗುರುವಾರ ಶ್ರಾವಣ ಮಾಸದ ಮುಕ್ತಾಯ ಸಮಾರಂಭ ಅತ್ಯಂತ ಅದ್ಧೂರಿಯಾಗಿ ನೆರವೇರಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ. ಶ್ರಾವಣ ಮಾಸದ ಪರ್ಯಂತ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದ ನಿಮಿತ್ಯ ಗುರುವಾರ ಮಧ್ಯಾಹ್ನ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಪುರಪ್ರವೇಶ, ಅದ್ಧೂರಿ ಶೋಭಾಯಾತ್ರೆ ಮತ್ತು ಸದ್ಗುರು ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಪಲ್ಲಕ್ಕಿ ಉತ್ಸವ ನಡೆಯಲಿದೆ. […]

Continue Reading

ಗೋವಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವ ಶಹಾಬಾದ ಪ್ರತಿಭೆಗೆ ಶುಭ ಹಾರೈಕೆ ಶಹಾಬಾದ: ಗೋವಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಹೊಗುತ್ತಿರುವ ಕಲಬುರಗಿ ಜಿಲ್ಲೆಯ ಪ್ರತಿಭೆಗೆ ಶುಭ ಹಾರೈಕೆಗಳು. ಆದಿರುಶ್ ಅವರ ಪ್ರೊಫೈಲ್ ಇಲ್ಲಿದೆ:ಹೆಸರು: ಆದಿರುಶ್ವಯಸ್ಸು: 9 ವರ್ಷಶಿಕ್ಷಣ: 3ನೇ ತರಗತಿ, ಎಸ್‌ಆರ್‌ಎನ್ ಮೆಹ್ತಾ ಸಿಬಿಎಸ್‌ಇ ಶಾಲೆ, ಗುಲ್ಬರ್ಗಾಮಾದರಿ ಮತ್ತು ಸಾಧನೆಗಳು:

Continue Reading

ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಎಲೆಕ್ಟ್ರಿಕಲ್‌ ಸಿಟಿ ಬಸ್‌ಗಳ ಆರಂಭಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧಾರ

ಗಂಗಾವತಿ: ಕಲ್ಯಾಣ ಕರ್ನಾಟಕ ಭಾಗದ ಆಯ್ದ ನಗರಗಳಲ್ಲಿ ಸಂಚಾರ ದಟ್ಟಣೆಗೆ ಶೀಘ್ರವೇ ಪರಿಹಾರ ಸಿಗಲಿದೆ. ಅಕ್ಟೋಬರ್‌ ಆರಂಭದಲ್ಲಿ 200 ಎಲೆಕ್ಟ್ರಿಕಲ್‌ ಸಿಟಿ ಬಸ್‌ಗಳನ್ನು ರಸ್ತೆಗೆ ಇಳಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಪ್ರಧಾನಮಂತ್ರಿ ವಿದ್ಯುನ್ಮಾನ ಯೋಜನೆಯಡಿ (ಪಿಎಂಇ) ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್‌ ಬಸ್‌ಗಳನ್ನು ಓಡಿಸಲಾಗುತ್ತದೆ. ಸಾರಿಗೆ ನಿಗಮದ ಅನುದಾನದಲ್ಲಿ ಕೊಪ್ಪಳ, ವಿಜಯನಗರ, ಬೀದರ್‌ ಮತ್ತು ರಾಯಚೂರು ಜಿಲ್ಲೆಗಳಿಗೆ ಡೀಸೆಲ್‌ ಆಧರಿತ ನೂತನ ಸಿಟಿ ಬಸ್‌ಗಳನ್ನು ಪೂರೈಸಲಾಗುತ್ತದೆ. […]

Continue Reading

ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಚಿಕ್ಕಬಳ್ಳಾಪುರದಲ್ಲಿ ಶೀಘ್ರ ಲೋಕಾರ್ಪಣೆ: ಇಲ್ಲಿ ಬಿಲ್ಲಿಂಗ್‌ ಕೌಂಟರೇ ಇರಲ್ವಂತೆ

ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೆನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಜಗತ್ತಿನಲ್ಲೇ ಅತಿ ದೊಡ್ಡ ಉಚಿತ ಆಸ್ಪತ್ರೆ ತಲೆ ಎತ್ತುತ್ತಿದೆ. ಮೊದಲ ಬಾರಿಗೆ ಜಗತ್ತಿನ ಎಲ್ಲಾ ಭಾಗದ ಎಲ್ಲಾ ಜನರಿಗೂ ಉಚಿತವಾಗಿ ವೈದ್ಯಕೀಯ ಸೇವೆ ಒದಗಿಸುವ ಬೃಹತ್‌ ಕಟ್ಟಡ ತಲೆ ಎತ್ತುತ್ತಿದೆ. ಸುಮಾರು 6,50,000 ಚದರಡಿ ವಿಸ್ತೀರ್ಣದಲ್ಲಿ ತಲೆ ಎತ್ತುತ್ತಿರುವ ಈ ಭವ್ಯ ಆಸ್ಪತ್ರೆಯಲ್ಲಿ 28 ವೈದ್ಯಕೀಯ ವಿಭಾಗಗಳು ಕಾರ್ಯನಿರ್ವಹಿಸಲಿವೆ. ಭಾರತದ ಮೊದಲ ಉಚಿತ ಗ್ರಾಮೀಣ ವೈದ್ಯಕೀಯ ಕಾಲೇಜಾಗಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ 2023ರಲ್ಲಿ […]

Continue Reading

ಆರೋಗ್ಯ ಸಂಪತ್ತೆ ನಿಜವಾದ ಶ್ರೇಷ್ಠ ಸಂಪತ್ತು: ಸಿದ್ದಲಿಂಗ ಬಾಳಿ

ಸುದ್ದಿ ಸಂಗ್ರಹ ಚಿತ್ತಾಪುರ ಜಗತ್ತಿನಲ್ಲಿ ಎಲ್ಲಾ ಸಂಪತ್ತುಗಳಿಗಿಂತ ಆರೋಗ್ಯವೇ ನಿಜವಾದ ಶ್ರೇಷ್ಠ ಸಂಪತ್ತು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಂಪನ್ಮೂಲ ಶಿಕ್ಷಕ ಸಿದ್ದಲಿಂಗ ಬಾಳಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,‌ ನಾವು ಜೀವನದಲ್ಲಿ ಏನೆಲ್ಲಾ ಸಂಪಾದನೆ ಮಾಡಿದರೂ ಆರೋಗ್ಯ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಇಂದು ವ್ಯಸನಗಳು ಹೆಚ್ಚಾಗಿ ಜನಸಾಮಾನ್ಯರ ಬದುಕನ್ನು ಸಾವಿಗೆ ದೂಡುತ್ತಿವೆ. ದೇಶದ ಪ್ರಗತಿಗೆ […]

Continue Reading

ಪಪ್ಪಾಯಿ ಹಣ್ಣು ಆರೋಗ್ಯಕರ ಮತ್ತು ಲಾಭದಾಯಕ ಕೃಷಿ

ಸುದ್ದಿ ಸಂಗ್ರಹ ಕಾಳಗಿ ಪಪ್ಪಾಯಿ ಹಣ್ಣು ಕೃಷಿಗೆ ಶ್ರಮದಾಯಕ ಅಗತ್ಯ. ಸೂಕ್ತ ಕಾಲಕ್ಕೆ ಬೆಳೆ ನಿರ್ವಹಣೆ ಮಾಡಬೇಕು. ಇದರ ಸೇವನೆ ಆರೋಗ್ಯಕರ ಮತ್ತು ರೈತರಿಗೆ ಲಾಭದಾಯಕ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ ಹೇಳಿದರು. ತಾಲೂಕಿನ ಹೆಬ್ಬಾಳ ಸಮೀಪದ ದೇಸಾಯಿಯವರ ಪಪ್ಪಾಯಿ ತೋಟದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಪಪ್ಪಾಯಿ ಹಣ್ಣು ಜೀರ್ಣಾಂಗದ ಆರೋಗ್ಯ ಸುಧಾರಿಸುತ್ತದೆ. […]

Continue Reading

ಕೆಎಸ್‌ಆರ್​ಟಿಸಿಯಲ್ಲಿ ಲಂಚಾವತಾರ: ಲಾಂಗ್ ರೂಟ್ ಡ್ಯೂಟಿ ನೀಡಲು ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು

ಬೆಂಗಳೂರು: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂ ಲಂಚ ಪಡೆದಿರುವ ಬಗ್ಗೆ ಮಾಧ್ಯಮದಲ್ಲಿ ಸುದ್ದಿ ಮಾಡಲಾಗಿತ್ತು. ಆ ನಂತರ 13 ಜನ ಅಧಿಕಾರಿಗಳು ಅಮಾನತು ಆಗಿದ್ದರು. ಈಗ ಲಂಚ ಪಡೆಯುವ ಸರದಿ ಕೆಎಸ್‌ಆರ್​ಟಿಸಿಗೂ ಕಾಲಿಟ್ಟಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದಿರುವದು ಸಾಕ್ಷಿ ಲಭ್ಯವಾಗಿದೆ. ಕೆಎಸ್‌ಆರ್​ಟಿಸಿ ಡಿಪೋ- 1 ರಲ್ಲಿ ಸುಮಾರು 100 ಬಸ್​​ಗಳಿವೆ. ಈ ಬಸ್​​ಗಳು ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕೇರಳ, ತಮಿಳುನಾಡು ಸೇರಿದಂತೆ ಬೇರೆ […]

Continue Reading