ರಾಜ್ಯದಲ್ಲೇ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು: ಆರೆಂಜ್ ಅಲರ್ಟ್ ಘೋಷಣೆ

ಸುದ್ದಿ ಸಂಗ್ರಹ ಕಲಬುರಗಿ ಬುಧವಾರ ರಾಜ್ಯದಲ್ಲಿಯೆ ಅತಿ ಹೆಚ್ಚು ಉಷ್ಣಾಂಶ ಕಲಬುರಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ತಾಪಮಾನ ತೀವ್ರ ಏರಿಕೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಕಲಬುರಗಿ ತಾಲೂಕಿನ ಔರಾದ್‌ನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ, ಚಿಂಚೋಳಿ ಹಾಗೂ ಅಫಜಲಪುರ ತಾಲೂಕುಗಳಲ್ಲಿ ತಲಾ 44.03 ಡಿಗ್ರಿ ಸೆಲ್ಸಿಯಸ್, ಆಳಂದ ತಾಲೂಕಿನಲ್ಲಿ 44.01 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ವಿಶೇಷವಾಗಿ ಕಲಬುರಗಿ ತಾಲೂಕಿನ ಔರಾದ್ ಗ್ರಾಮದಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದು […]

Continue Reading

ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು

ಸುದ್ದಿ ಸಂಗ್ರಹ ಚಿಕ್ಕೋಡಿ ಹುಕ್ಕೇರಿ ತಾಲೂಕಿನ ನದಿಗುಡಿಕೇತರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಸಿದವನ ಜೊತೆ ಓಡಿ ಹೋಗಿದ್ದ ಮಹಿಳೆಯನ್ನು ಪೋಷಕರು ಕರೆತಂದು ವಿಷ ಕುಡಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷಿ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಿದ್ದಾರೆ. ಕೊಲೆಯಾದ ಮಹಿಳೆಯನ್ನು ಗ್ರಾಮದ ಸತ್ತೆವ್ವಾ ಹೆಳವರ್ ಎಂದು ಗುರುತಿಸಲಾಗಿದೆ. ಈಕೆ ಇದೆ ಗ್ರಾಮದ ಕೃಷ್ಣಾ ಪಾಟೀಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಮನೆಯಲ್ಲಿ ಗೊತ್ತಾಗಿ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ ಹೇಳವಿ ಎಂಬಾತನ ಜೊತೆ […]

Continue Reading

ಸಂವಿಧಾನ ಮುಸ್ಲಿಮರಿಗೆ ರಕ್ಷಾ ಕವಚವಾಗಿ ನಿಂತಿದೆ: ಡಾ.ಫಾರುಕ್ ಮಣ್ಣೂರ

ಸುದ್ದಿ ಸಂಗ್ರಹ ಶಹಾಬಾದ ಡಾ.ಬಿ.ಆರ್ ಅಂಬೇಡ್ಕರ್ ಅವರು ರೂಪಿಸಿದ ಭಾರತದ ಸಂವಿಧಾನ ದೇಶದ ಅಲ್ಪಸಂಖ್ಯಾತರಿಗೆ ಕೇವಲ ಒಂದು ಕಾನೂನಿನ ಪುಸ್ತಕವಲ್ಲ, ಅದು ಅವರ ಹಕ್ಕುಗಳ ಭದ್ರಕೋಟೆಯಾಗಿ ಮತ್ತು ರಕ್ಷಣಾ ಕವಚವಾಗಿ ನಿಂತಿದೆ ಎಂದು ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಫಾರುಕ್ ಮಣ್ಣೂರ ಹೇಳಿದರು. ನಗರದ ವಾರ್ಡ ನಂ.27 ಬಡಾವಣೆಯ ಜಯಂತ್ಯೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ 135ನೇ ಜಯಂತಿಯ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ 25ರಿಂದ 28ನೇ ವಿಧಿಯ ಪ್ರಕಾರ ಪ್ರತಿಯೊಬ್ಬ ನಾಗರಿಕನಿಗೂ […]

Continue Reading

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

ಸುದ್ದಿ ಸಂಗ್ರಹ ನವದೆಹಲಿ ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆಗೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ. ಯಾರೆಲ್ಲಾ ಹೋಗುತ್ತಿದ್ದಾರೆ ?ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.

Continue Reading

ಡಿಜಿಟಲ್ ತಂತ್ರಜ್ಞಾನದಿಂದ ಯುವಕರಿಗೆ ಉದ್ಯೋಗವಕಾಶ: ವಾಸುದೇವ ಚವ್ಹಾಣ‌

ಸುದ್ದಿ ಸಂಗ್ರಹ ಶಹಾಬಾದ ಇಂದಿನ ಆಧುನಿಕ ಯುಗವು ಡಿಜಿಟಲ್ ತಂತ್ರಜ್ಞಾನಗಳ ಯುಗವಾಗಿದ್ದು, ಡಿಜಿಟಲ್ ತಂತ್ರಜ್ಞಾನ ಕೇವಲ ಕಲಿಕೆಗೆ ಸೀಮಿತವಾಗದೆ, ಅಪಾರ ಉದ್ಯೋಗಾವಕಾಶಗಳಗಣಿಯಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ವಾಸುದೇವ ಚವ್ಹಾಣ ಹೇಳಿದರು. ಮಂಗಳವಾರ ನಗರದ ಹೈ-ಕ ಶಿಕ್ಷಣ ಸಂಸ್ಥೆಯ ಎಸ್‌.ಎಸ್ ಮರಗೋಳ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ‘ಯುವಕರಿಗೆ ಡಿಜಿಟಲ್ ಉದ್ಯೋಗ ಅವಕಾಶಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಅವರು, ವಿದ್ಯಾರ್ಥಿಗಳು ಕೇವಲ ಪದವಿ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ, ಮಾರುಕಟ್ಟೆಯ […]

Continue Reading

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

ಸುದ್ದಿ ಸಂಗ್ರಹ ವಿಜಯಪುರ ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ ಮಗನನ್ನೇ ಪಾಪಿ ತಂದೆ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ(6) ಹತ್ಯೆಯಾದ ಬಾಲಕ. ಮಲ್ಲಿಕಾರ್ಜುನ ಅರಕೇರಿ ಮಗನನ್ನೇ ಹತ್ಯೆ ಮಾಡಿದ ತಂದೆ. ಕಳೆದ ಮಾರ್ಚ್ 16ರಂದು ಪುತ್ರನನ್ನು ಕೃಷ್ಣಾ ನದಿಗೆ ತಳ್ಳಿ ಹತ್ಯೆ ಮಾಡಿದ್ದಾನೆ ಮಲ್ಲಿಕಾರ್ಜುನ. 6 ವರ್ಷದ ಪುತ್ರ ಸಿದ್ದಾರ್ಥ ನೋಡಲು ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಪ್ರತಿನಿತ್ಯ […]

Continue Reading

ಬಿಜೆಪಿ ಕಚೇರಿಯಲ್ಲಿ ಬಾಬಾ ಸಾಹೇಬರ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಡಾ‌. ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಾತಿ ತಾರತಮ್ಯದ ವಿರುದ್ಧ ಹೋರಾಡಲು ಡಾ.ಅಂಬೇಡ್ಕರ್ ಅವರು ತಮ್ಮ ಸಂಪೂರ್ಣ ಜೀವನವನ್ನು ಮುಡಿಪಾಗಿಟ್ಟು, ಸದೃಢ ರಾಷ್ಟ್ರಕ್ಕಾಗಿ ಸಂವಿಧಾನದ ಮುಖಾಂತರ ಮುನ್ನುಡಿ ಬರೆದರು ಎಂದರು. ಅಂಬೇಡ್ಕರ್ ಅವರ ಬದುಕು, ತತ್ವ, ಆದರ್ಶಗಳು ನಮ್ಮ ಪಾಲಿಗೆ ಸಾರ್ವಕಾಲಿಕ ಸಕಾಲಿಕವಾಗಿವೆ. ಜಾತಿಭೇದವಿಲ್ಲದ ಸಮಸಮಾಜದ ಪ್ರಗತಿಯ ಕನಸು ಕಂಡ ಮೇರು ನಾಯಕ. ಇವರ ಆದರ್ಶ […]

Continue Reading

17 ಪ್ರಕರಣ: 31.41 ಲಕ್ಷ ಮೌಲ್ಯದ ಸ್ವತ್ತು ಜಪ್ತಿ

ಸುದ್ದಿ ಸಂಗ್ರಹ ಕಲಬುರಗಿಶಹಾಬಾದ್ ಮತ್ತು ಆಳಂದ ಉಪವಿಭಾಗದ ವಿವಿಧಪೊಲೀಸ್ ಠಾಣೆಗಳ ವ್ಯಾಪ್ತಿಯ 17 ಕಳವು ಪ್ರಕರಣಗಳನ್ನು ಭೇದಿಸಿರುವ ಜಿಲ್ಲಾ ಪೊಲೀಸರು, 6 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 31.41 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಖ್ಯಾತ ಮನೆಗಳ್ಳರ ಬಂಧನ: ಕಾಳಗಿ ಪೊಲೀಸ್ ಠಾಣೆ ವ್ಯಾಪ್ತಿಯ ಟೆಂಗಳಿ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆಳಂದ ತಾಲೂಕಿನ ಕಮಸರನಾಯಕ ತಾಂಡಾದ ಅಪ್ಪಾಜಿ ಗಂಗಾರಾಮ ಚವ್ಹಾಣ (22) ಹಾಗೂ ಮಿಥುನ ಲಕ್ಷ್ಮಣ […]

Continue Reading

ಮಂತ್ರಾಲಯ ರಾಯರ ಮಠಕ್ಕೆ ಮಂಜೂರಾದ ಜಾಗದ ಸರ್ವೆಗೆ ಭಾರಿ ವಿರೋಧ: ಹಲವರು ವಶಕ್ಕೆ

ಸುದ್ದಿ ಸಂಗ್ರಹ ರಾಯಚೂರು ಬಿಚ್ಚಾಲಿ ಗ್ರಾಮದಲ್ಲಿನ ರಾಘವೇಂದ್ರ ಸ್ವಾಮಿಗಳ ಏಕಶಿಲಾ ವೃಂದಾವನದ ಪಕ್ಕದ ಭೂಮಿ ವಿವಾದ ಹಿನ್ನೆಲೆ ಅಧಿಕಾರಿಗಳು ಸರ್ವೆ ನಡೆಸಿದ್ದಾರೆ. ಈ ವೇಳೆ ಸರ್ವೆಗೆ ವಿರೋಧಿಸಿ ಹೋರಾಟ ನಡೆಸಿದ ಗ್ರಾಮಸ್ಥರು, ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಸೂಚನೆಯಂತೆ ಗ್ರಾಮದ 2 ಎಕರೆ 33 ಗುಂಟೆ ಜಾಗದ ಸರ್ವೆಗೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು, ಅರ್ಚಕರು, ಸಾಗುವಳಿ ಮಾಡುತ್ತಿರುವ ರೈತರು ವಿರೋಧ ವ್ಯಕ್ತಪಡಿಸಿ ಹೋರಾಟ ಮಾಡಿದರು. ಮಂತ್ರಾಲಯ ಮಠ ರಾಘವೇಂದ್ರ ಸ್ವಾಮಿಗಳ ಚಾರಿತ್ರಿಕ ಸ್ಥಳಗಳ ಅಭಿವೃದ್ಧಿಗಾಗಿ ಜಮೀನು […]

Continue Reading

ಸಾಂಸ್ಕೃತಿಕ ನಾಯಕ ಬಸವಣ್ಣನವರ ಕೊಡುಗೆ ಅವಿಸ್ಮರಣೀಯ

ಸುದ್ದಿ ಸಂಗ್ರಹ ಕಲಬುರಗಿ ಸಮಾನತೆ, ಕಾಯಕ ತತ್ವ, ಸ್ತ್ರೀ ಸಮಾನತೆ ಮತ್ತು ಜಾತಿ ರಹಿತ ಸಮಾಜಕ್ಕಾಗಿ ಶ್ರಮಿಸಿದ ಬಸವಣ್ಣನವರ ತತ್ವಗಳು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಅಡಿಪಾಯವಾಗಿದೆ. ಈ ಘೋಷಣೆಯು ಅವರ ಸಾಮಾಜಿಕ ನ್ಯಾಯದ ಹರಿಕಾರರ ಪಾತ್ರ ಗೌರವಿಸುತ್ತದೆ ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ಕಾಳಗಿ ತಾಲೂಕಿನ ಕೋರವಾರದ ಅಣವೀರಭದ್ರೇಶ್ವರ ಪ್ರೌಢ ಶಾಲೆಯಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತ್ಯುತ್ಸವದ ನಿಮಿತ್ಯ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಏರ್ಪಡಿಸಿದ್ದ “ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು […]

Continue Reading