ರಸಗೊಬ್ಬರಕ್ಕಾಗಿ ರೈತರು ಆತಂಕ ಪಡಬೇಡಿ: ದೇವಿಂದ್ರ ಅರಣಕಲ್…..ಸುದ್ದಿ ಸಂಗ್ರಹ ಚಿತ್ತಾಪುರಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ. ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಿಂದ ರೈತರಿಗೆ ರಸಗೊಬ್ಬರ ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದ್ದಾರೆ……ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಂಗಾರು ಬಿತ್ತನೆಗೆ ರೈತರು ತರಾತುರಿ ಮಾಡಬಾರದು. ಮುಂಗಾರು ಮಳೆಗಾಲ […]

Continue Reading

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲು

ಸುದ್ದಿ ಸಂಗ್ರಹ ರಾಯಚೂರುಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಯುವನ ಚಂದ್ರ , ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23), ಉರವಕೊಂಡದ ಸಂಧ್ಯಾ (22) ನೀರು ಪಾಲಾದವರು. ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ. ಪೂಜೆಯ ಬಳಿಕ ನದಿಯಲ್ಲಿ ಈಜಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ. ನದಿಯಲ್ಲಿ ನೀರಿನ ಆಳ ತಿಳಿಯದೆ ಈಜಲು ಹೋಗಿ ನೀರು […]

Continue Reading

ಕಲಬುರಗಿ: ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮನವಿ

ಸುದ್ದಿ ಸಂಗ್ರಹ ಕಲಬುರಗಿ2026–27ನೇ ಸಾಲಿನ ಶೈಕ್ಷಣಿಕ ವರ್ಷವು ಜೂನ್ 1ರಿಂದ ಆರಂಭವಾಗುತ್ತಿದ್ದು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ಆಯೋಜಿಸಲಾಗುತ್ತಿದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಸಂಕನೂರ್‌ ಪಾಲಕ–ಪೋಷಕರಲ್ಲಿ ಮನವಿ ಮಾಡಿದ್ದಾರೆ. ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಪಾಲಕ–ಪೋಷಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, ಗುಣಮಟ್ಟದ ಶಿಕ್ಷಣವು ಪ್ರತಿ ಮಗುವಿನ ಮೂಲಭೂತ ಹಕ್ಕಾಗಿದ್ದು, ಅದನ್ನು ಈಡೇರಿಸುವ ಮತ್ತು ಸಮೃದ್ಧ ಸಮಾಜ ನಿರ್ಮಾಣದ ಭದ್ರ ಅಡಿಪಾಯ ಹಾಕುವ ಜವಾಬ್ದಾರಿ ಪಾಲಕರ ಮೇಲಿದೆ. ಶಾಲೆ ಮತ್ತು […]

Continue Reading

ರಸಗೊಬ್ಬರಕ್ಕಾಗಿ ರೈತರು ಆತಂಕ ಪಡಬೇಡಿ: ದೇವಿಂದ್ರ ಅರಣಕಲ್

ಸುದ್ದಿ ಸಂಗ್ರಹ ಚಿತ್ತಾಪುರಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ. ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದಿಂದ ರೈತರಿಗೆ ರಸಗೊಬ್ಬರ ಪೂರೈಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ದೇವಿಂದ್ರ ಅರಣಕಲ್ ಹೇಳಿದ್ದಾರೆ. ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಂಗಾರು ಬಿತ್ತನೆಗೆ ರೈತರು ತರಾತುರಿ ಮಾಡಬಾರದು. ಮುಂಗಾರು ಮಳೆಗಾಲ ಶುರುವಾಗಲು ಇನ್ನೂ ಒಂದು ವಾರ […]

Continue Reading

ಲೋಕಭವನದ ಗ್ಲಾಸ್‌ಹೌಸ್‌ನಲ್ಲೆ ಡಿಕೆಶಿ ಪ್ರಮಾಣ ಸ್ವೀಕಾರ: ಸಾರ್ವಜನಿಕರಿಗಿಲ್ಲ ಪ್ರವೇಶ

ಸುದ್ದಿ ಸಂಗ್ರಹ ಬೆಂಗಳೂರುಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಬುಧವಾರ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಜೆ.ಸಿ ಚಂದ್ರಶೇಖರ್‌ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್‌ 3 ರಂದು ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿದೆ. ಅದೆ ದಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ ನಡೆಯಲಿದೆ ಎಂದರು. ಆರಂಭದಲ್ಲಿ ಬೇರೆ ಬೇರೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆದುಕೊಂಡು ಬರಬೇಕು, ಅದಕ್ಕಾಗಿ ಬಸ್‌ […]

Continue Reading

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪದಗ್ರಹಣ: 8 ಸಚಿವರ ಜೊತೆ ಪ್ರಮಾಣವಚನ ?

ಸುದ್ದಿ ಸಂಗ್ರಹ ಬೆಂಗಳೂರುಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರದ ಸಿದ್ಧತೆಗಳು ನಡೆಯುತ್ತಿವೆ. ಬಹುತೇಕ ಸೋಮವಾರ ಗೋಧೂಳಿ ಸಮಯದಲ್ಲಿ ಡಿ.ಕೆ ಶಿವಕುಮಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳು ಹೆಚ್ಚಾಗಿವೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ. ಏಕಾಂಗಿಯಾಗಿ ಪ್ರಮಾಣವಚನ ಸ್ವೀಕರಿಸಲು ಡಿಕೆಶಿ ಆಸಕ್ತಿ ತೋರಿಸಿದ್ದು, ಉಪ ಮುಖ್ಯಮಂತ್ರಿ ಸೇರಿದಂತೆ 8 ಮಂದಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಬೇಕೆಂಬ ಒತ್ತಡ ಹಿರಿಯ ನಾಯಕರಿಂದ ಕೇಳಿಬರುತ್ತಿದೆ. ಅಂತಿಮವಾಗಿ ರಾಹುಲ್ ಗಾಂಧಿ […]

Continue Reading

ಪ್ರಿಯಾಂಕ್ ಖರ್ಗೆಗೆ ಡಿಸಿಎಂ ಸ್ಥಾನ ನೀಡಲು ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ

ಸುದ್ದಿ ಸಂಗ್ರಹ ಚಿತ್ತಾಪುರಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಬೇಕ ಎಂದು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಎದುರು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಘೋಷಣೆಗಳು ಕೂಗುತ್ತಾ ತಮ್ಮ ಒತ್ತಾಯ ವ್ಯಕ್ತಪಡಿಸಿದ ಮುಖಂಡರು, 2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಪ್ರಿಯಾಂಕ್ […]

Continue Reading

ಧರ್ಮಸ್ಥಳ: ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಪದಾರ್ಥ ನೀಡಿ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಸುದ್ದಿ ಸಂಗ್ರಹ ಮಂಗಳೂರುಧರ್ಮಸ್ಥಳದಲ್ಲಿ ಯಾತ್ರಾರ್ಥಿ ವೃದ್ಧೆಗೆ ಪ್ರಜ್ಞೆ ತಪ್ಪುವ ಔಷಧಿ ನೀಡಿ ದರೋಡೆ ಮಾಡಿರುವ ಘಟನೆ ನಡೆದಿದೆ. 70 ವರ್ಷದ ಮಹಿಳೆಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಬೆಂಗಳೂರು ಬನ್ನೇರುಘಟ್ಟ ಮೂಲದ ಪ್ರೇಮಾ ಕೆ ಮೋಸ ಹೋದ ವೃದ್ಧೆ. ಅಪರಿಚಿತರು ಪ್ರಸಾದ, ಜ್ಯೂಸ್ ನೀಡಿ ಪರಿಚಯ ಬೆಳೆಸಿ ಕೃತ್ಯ ಎಸಗಿದ್ದಾರೆ. 112 ಗ್ರಾಂ ಚಿನ್ನಾಭರಣ, 7 ಸಾವಿರ ನಗದು ಕಳವು ಮಾಡಲಾಗಿದೆ. ದೇವಸ್ಥಾನದ ಮುಖ್ಯದ್ವಾರದ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಅಸ್ವಸ್ಥಗೊಂಡ ವೃದ್ಧೆಯನ್ನು […]

Continue Reading