ಸುದೀರ್ಘ ಅವಧಿ ಪ್ರಧಾನಿಯಾಗಿ ನರೇಂದ್ರ ಮೋದಿ ಹೊಸ ದಾಖಲೆ: ವೀರಣ್ಣ ಯಾರಿ ಸುದ್ದಿ ಸಂಗ್ರಹ ವಾಡಿ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೆ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಆಯ್ಕೆಯಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಭಾಜನರಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಪಟ್ಟಣದ ಶಕ್ತಿ ಆಂಜನೇಯ ದೇವಸ್ಥಾನದಲ್ಲಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಮೋದಿ ಅವರ ಕಟೌಟ್’ಗೆ ಹಾಲಿನ ಅಭಿಷೇಕ ಮಾಡಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರಧಾನಿ […]
Continue Readingಇಂಗಳಗಿ ಅಂಗನವಾಡಿ ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ
ಸುದ್ದಿ ಸಂಗ್ರಹ ಶಹಾಬಾದ್ಇಂಗಳಗಿ ಅಂಗನವಾಡಿ ಕಾರ್ಯಕರ್ತೆ ಶೇಖಮ್ಮ ಕುರಿ ಕರ್ತವ್ಯಕ್ಕೆ ಹಾಜರಾಗದೆ ಸತತ ಗೈರು ಇದ್ದು, ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ನಗರದ ಸಿಡಿಪಿಒ ಕಚೇರಿ ಎದುರು ಇಂಗಳಗಿ ಗ್ರಾಮ ಅಭಿವೃದ್ಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂಗಳಗಿ ಗ್ರಾಮದ ಅಂಗನವಾಡಿ ಕೇಂದ್ರ-1ರ ಕಾರ್ಯಕರ್ತೆ ಶೇಖಮ್ಮ ಕುರಿ ಕೇಂದ್ರಕ್ಕೆ ಹೋಗುವುದಿಲ್ಲ. ಮಕ್ಕಳಿಗೆ ಸರಿಯಾಗಿ ಪೌಷ್ಟಿಕ ಆಹಾರ ವಿತರಣೆ ಮಾಡುವುದಿಲ್ಲ. ಕಳೆದ 15 ವರ್ಷಗಳಿಂದ ರಾಜಕೀಯ ಪ್ರಭಾವ ಬೀರಿ, ಅಂಗನವಾಡಿ ಕೇಂದ್ರದ ಕೆಲಸ ಮಾಡದೆ ಅಕ್ರಮವಾಗಿ […]
Continue Readingಅಪಘಾತಕ್ಕೊಳಗಾದವರಿಗೆ ಸಹಾಯ ಮಾಡಿದ್ರೆ 25,000 ರೂ. ಗಿಫ್ಟ್
ಸುದ್ದಿ ಸಂಗ್ರಹ ನವದೆಹಲಿರಸ್ತೆ ಅಪಘಾತಗಳಿಂದಾಗಿ ಪ್ರತಿವರ್ಷ ಸಾವಿರಾರು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಅಪಘಾತಕ್ಕೊಳಗಾದವರನ್ನು ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ನೆರವು ನೀಡುವವರಿಗೆ ಕೇಂದ್ರ ಸರ್ಕಾರ ರಹಾ-ವೀರ್ ಯೋಜನೆ ಅಡಿಯಲ್ಲಿ 25 ಸಾವಿರ ರೂ ನೀಡಲಿದೆ. ಅಲ್ಲದೆ ಅಂಥವರಿಗೆ ಕಾನೂನಿನ ರಕ್ಷಣೆಯನ್ನೂ ನೀಡಲಾಗುತ್ತದೆ. ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆಯನ್ನು ಗೋಲ್ಡನ್ ಅವರ್ ಎನ್ನಲಾಗುತ್ತದೆ. ಈ ಸಮಯದಲ್ಲಿ ಗಾಯಾಳುವಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ದೊರೆತರೆ ಸಾವು ಅಥವಾ ಆಗಬಹುದಾದ ಅಪಾಯವನ್ನು ಕಡಿಮೆ ಮಾಡಬಹುದು. ಹೀಗಾಗಿ ರಹಾ-ವೀರ್ ಆಗಲು ಯಾವುದೆ […]
Continue Readingಐಸ್ಕ್ರೀಮ್ ಬೇಕಂತ ಹಠ ಮಾಡಿದ್ದಕ್ಕೆ ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಪೊಲೀಸರ ಬಳಿ ಸತ್ಯ ಬಿಚ್ಚಿಟ್ಟ ಆರೋಪಿ ಮೋಹನ್
ಸುದ್ದಿ ಸಂಗ್ರಹ ಬೆಂಗಳೂರುಕಾಡುಗೋಡಿ ಠಾಣಾ ವ್ಯಾಪ್ತಿಯ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಆರೋಪಿ ಮೋಹನ್ ತಪ್ಪೊಪ್ಪಿಕೊಂಡಿದ್ದಾನೆ. ಮಗು ಐಸ್ಕ್ರೀಮ್ ಬೇಕೆಂದು ಹಠ ಮಾಡಿದಕ್ಕೆ ಆಕೆಯ ಹೊಟ್ಟೆಗೆ ಬಲವಾಗಿ ಒದ್ದು, ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ. ಕೊಲೆಯ ಬಗ್ಗೆ ತಪ್ಪೊಪ್ಪಿಗೆಪೊಲೀಸ್ ತನಿಖೆ ವೇಳೆ ಆರೋಪಿ ಮೋಹನ್ ನೀಡಿದ ಹೇಳಿಕೆ ಅಧಿಕಾರಿಗಳನ್ನೇ ಬೆಚ್ಚಿಬೀಳಿಸಿದೆ. ಮಾರ್ಚ್ 21ರಂದು ಪ್ರಿಯಾಂಕಾ ಮತ್ತು ಮೋಹನ್ ಮಧುರೈಗೆ ಮೂರು ದಿನಗಳ ದೇವಸ್ಥಾನ ಪ್ರವಾಸಕ್ಕೆ ತೆರಳಿದ್ದರು. ಮಾರ್ಚ್ 24 ರಂದು ಬೆಂಗಳೂರಿಗೆ ವಾಪಸ್ ಬಂದಿದ್ದರು. ಅದೆ […]
Continue Readingವಾಡಿ: ಮೂಲಭೂತ ಸೌಕರ್ಯ ಒದಗಿಸಲು ಬಿಜೆಪಿ ಒತ್ತಾಯ
ಸುದ್ದಿ ಸಂಗ್ರಹ ವಾಡಿಪಟ್ಟಣದ ನಿವಾಸಿಗಳಿಗೆ ರಸ್ತೆ ಸೇರಿದಂತೆ ಇತರ ಮೂಲ ಸೌಲಭ್ಯಗಳನ್ನು ಒದಗಿಸಕೊಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿಮನೋಜಕುಮಾರ ಗುರಿಕಾರ ಅವರಿಗೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಿಸಿದರು. ಪಟ್ಟಣದಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ರಸ್ತೆ, ಚರಂಡಿ ನೀರು ತಗ್ಗು ಪ್ರದೇಶಗಳಲ್ಲಿ, ಅಂಗಡಿಗಳಲ್ಲಿ ಮತ್ತು ಮನೆಗಳಲ್ಲಿ ನುಗ್ಗುವುದು ಸಾಮಾನ್ಯವಾಗಿದೆ ಎಂದರು. ಪಟ್ಟಣದ ಪ್ರಮುಖ ರಸ್ತೆಗಳಾದ ಯಾದಗಿರಿ ರಸ್ತೆ, ರಾವೂರ ರಸ್ತೆ, ರೈಲ್ವೆ ಸ್ಟೇಷನ್ ರಸ್ತೆ ಸೇರಿದಂತೆ ವಿವಿಧೆಡೆ ರಸ್ತೆ, ಚರಂಡಿ ಮೇಲೆಯೇ ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ. ಇದರಿಂದ ಮಳೆಗಾಲದಲ್ಲಿ […]
Continue Readingಬ್ರೈನ್ ಟ್ಯೂಮರ್ಗೆ ಶಸ್ತ್ರಚಿಕಿತ್ಸೆಯೊಂದೆ ಪರಿಹಾರವೆ ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ
ಬ್ರೈನ್ ಟ್ಯೂಮರ್ ಎಂಬ ಪದವೆ ಭಯ ಮತ್ತು ಆತಂಕ ಹುಟ್ಟಿಸುತ್ತದೆ. ಇದರ ಬಗ್ಗೆ ಹೇಳುವುದೆ ಬೇಡ ಏಕೆಂದರೆ ಇದೊಂದು ಗಂಭೀರ ಕಾಯಿಲೆ ಎಂಬುದು ಎಲ್ಲರಿಗೂ ಸರ್ವೆ ಸಾಮಾನ್ಯವಾಗಿ ತಿಳಿದಿರುತ್ತದೆ. ಆದರೆ ಈ ಆರೋಗ್ಯ ಸಮಸ್ಯೆಯ ಬಗ್ಗೆ ಇರುವ ವಿಷಯಕ್ಕಿಂತ ಇಲ್ಲದಿರುವ ಸುಳ್ಳು ಸುದ್ದಿಗಳೇ ಹೆಚ್ಚು ಪ್ರಚಲಿತದಲ್ಲಿರುವುದರಿಂದ ಜನ ಯಾವುದನ್ನೂ ನಂಬಬೇಕು ಮತ್ತು ಯಾವುದು ಸುಳ್ಳು ಎಂಬುದರ ನಡುವೆ ಗೊಂದಲದಲ್ಲಿ ಇರುತ್ತಾರೆ. ಅಂತವುಗಳಲ್ಲಿ ಬ್ರೈನ್ ಟ್ಯೂಮರ್ಗೆ ಶಸ್ತ್ರಚಿಕಿತ್ಸೆಯೇ ಮದ್ದು ಎಂಬ ಮಾತು ಕೂಡ ಒಂದು. ಹಾಗಾದರೆ ಬ್ರೈನ್ ಟ್ಯೂಮರ್ […]
Continue Readingಜಪಾನ್ ಆಯ್ತು, ಈಗ ನೇಪಾಳದಿಂದಲೂ ಭಾರತದ ಮಾವಿನ ಹಣ್ಣಿಗೆ ನಿರ್ಬಂಧ
ಸುದ್ದಿ ಸಂಗ್ರಹ ಕಠ್ಮಂಡುಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದೆ. ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ ಹಣ್ಣಿನ ಸಾಗಣೆಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಕೀಟನಾಶಕ ಅಂಶಗಳು ಕಂಡುಬಂದಿವೆ. ಗ್ರಾಹಕರ ಆರೋಗ್ಯ ರಕ್ಷಣೆ ಮತ್ತು ಆಹಾರ ಸುರಕ್ಷತಾ ನಿಯಮಗಳ ಪಾಲನೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ. […]
Continue Readingಕಾಳಗಿ: 4.8 ಲಕ್ಷ ಮೌಲ್ಯದ 15 ಮೊಬೈಲ್ ಪತ್ತೆ ಹಚ್ಚಿದ ಪೊಲೀಸರು
ಸುದ್ದಿ ಸಂಗ್ರಹ ಕಾಳಗಿಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡು ಪ್ರಕರಣ ದಾಖಲಿಸಿದ್ದ ಅನೇಕ ವ್ಯಕ್ತಿಗಳಿಗೆ ಪೊಲೀಸರು ಮೊಬೈಲ್ ಹುಡುಕಿ ಕೊಟ್ಟಿದ್ದಾರೆ. ಸಿಇಐಆರ್ ಪೋರ್ಟಲ್ ಮೂಲಕ ಒಟ್ಟು 4.8 ಲಕ್ಷ ಮೊತ್ತದ 15 ಮೊಬೈಲ್ಗಳು ಪತ್ತೆ ಹಚ್ಚಿದ್ದಾರೆ. ವಾರಸುದಾರರಿಗೆ ಸೋಮವಾರ ಠಾಣೆಗೆ ಕರೆಯಿಸಿದ ಪೊಲೀಸರು ಮೊಬೈಲ್ ನೀಡಿದ್ದಾರೆ. ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ, ಕಾಳಗಿ ಸಿಪಿಐ ಜಗದೇವಪ್ಪ ಪಾಳಾ, ಪಿಎಸ್ಐ ತಿಮ್ಮಯ್ಯ ಬಿ.ಕೆ, ಹೆಡ್ಕಾನಸ್ಟೆಬಲ್ ಶ್ರೀಶೈಲ ಗೋನಾಕಿ, ಕಾನ್ಸ್ಟೆಬಲ್ ಮಾರುತಿ ರೆಡ್ಡಿ ಇದ್ದರು.
Continue Readingಉಸಿರಿಗಾಗಿ ಪರಿಸರ ಸಂರಕ್ಷಿಸಿ: ಶಂಕರ ಡಾಂಗೆ
ಸುದ್ದಿ ಸಂಗ್ರಹ ಚಿತ್ತಾಪುರಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದು ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರ ಡಾಂಗೆ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಎನ್’ಸಿಸಿ ಘಟಕದ ಹಾಗೂ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ. ಹಸಿರು ವಾತಾವರಣ ಮಾಯವಾಗುತ್ತಿದೆ. ಹಲವು ರೀತಿಯ ಮಾಲಿನ್ಯಗಳಿಂದ ಪರಿಸರ […]
Continue Readingಮುಯ್ ಥಾಯ್ ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ಎಎಸ್ಐ ಪುತ್ರ
ಸುದ್ದಿ ಸಂಗ್ರಹ ಬೆಂಗಳೂರುಬನಶಂಕರಿ ಸಂಚಾರ ಠಾಣೆಯ ಎಎಸ್ಐ ಕಾಂತರಾಜು ಅವರ ಪುತ್ರ ಶ್ರೀಹರ್ಷ ಬಿ.ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ. ಶ್ರೀಲಂಕಾದ ನೆಗೊಂಬೋದಲ್ಲಿ ನಡೆದ ಇಂಟರ್ನ್ಯಾಷನಲ್ ಅಂಡ್ ಥಾಯ್ ಮಾರ್ಷಲ್ ಆರ್ಟ್ಸ್ ಏಷ್ಯನ್ ಗೇಮ್ಸ್-2026 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶ್ರೀಹರ್ಷ, ಸ್ಪರ್ಧೆಯ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಆಟಗಾರನ ವಿರುದ್ಧ ಸೋಲಿಸಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನದ ಪದಕ […]
Continue Reading