ಕಲಬುರಗಿ: ಜು.29 ರಂದು ನಾಲವಾರ ಶ್ರೀಗಳ ಗುರುವಂದನಾ ಕಾರ್ಯಕ್ರಮ…..ಸುದ್ದಿ ಸಂಗ್ರಹ ನಾಲವಾರ ಗುರುಪೂರ್ಣಿಮೆ ನಿಮಿತ್ತ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಗುರುವಂದನಾ ಕಾರ್ಯಕ್ರಮ ಜುಲೈ 29ರಂದು ಬುಧವಾರ ಕಲಬುರಗಿ ನಗರದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ….,ಕಲಬುರಗಿಯ ಕರುಣೇಶ್ವರ ನಗರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನದ ಶಾಖಾಮಠದಲ್ಲಿ ಬುಧವಾರ ಸಂಜೆ 5 ಗಂಟೆಗೆ ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ ಎಂದರು…….ಗುರುವಂದನೆ ನಿಮಿತ್ತ ಕರ್ತೃ ಗದ್ದುಗೆಗೆ ವಿಶೇಷ ಪೂಜೆ […]
Continue Readingಫಿಟ್ನೆಸ್, ಇನ್ಶೂರೆನ್ಸ್ ಇಲ್ಲದ 390 ಖಾಸಗಿ ಶಾಲಾ ವಾಹನಗಳು ಸೀಜ್
ಸುದ್ದಿ ಸಂಗ್ರಹ ವಿಜಯನಗರಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಖಾಸಗಿ ಶಾಲಾ-ಕಾಲೇಜು ವಾಹನಗಳ ವಿರುದ್ಧ ಸಮರ ಸಾರಿದ್ದಾರೆ. ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಸೂಕ್ತ ದಾಖಲಾತಿಗಳಿಲ್ಲದೆ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಬರೋಬ್ಬರಿ 390 ಖಾಸಗಿ ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಫಿಟ್ನೆಸ್ ಪ್ರಮಾಣಪತ್ರ (FC) ಮತ್ತು ಇನ್ಶೂರೆನ್ಸ್ (ವಿಮೆ) ಇಲ್ಲದೆ ರಸ್ತೆಗಿಳಿದಿದ್ದ ವಾಹನಗಳ ವಿರುದ್ಧ ಆರ್ಟಿಒ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ಕಳೆದ ಫೆಬ್ರವರಿಯಿಂದ ಇಲ್ಲಿಯವರೆಗೆ ಒಟ್ಟು 103 ಪ್ರಕರಣಗಳನ್ನು ದಾಖಲಿಸಿಕೊಂಡಿರುವ […]
Continue Readingಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಕಠಿಣ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ
ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಅಕ್ರಮ ಮರಳು ಸಾಗಣೆಗೆ ಸಂಪೂರ್ಣ ಬ್ರೇಕ್ ಹಾಕಲು ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಕುರಿತು ರಾಜ್ಯಾದ್ಯಂತ ‘ಝೀರೋ ಟಾಲರೆನ್ಸ್’ ನೀತಿ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿ ಮತ್ತು ಐಜಿಪಿ ಎಂ.ಎ ಸಲೀಂ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜಾರಿಈ ಕುರಿತಾಗಿ ಗೃಹ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆ […]
Continue Readingಕಲಬುರಗಿ: ಜು.29 ರಂದು ನಾಲವಾರ ಶ್ರೀಗಳ ಗುರುವಂದನಾ ಕಾರ್ಯಕ್ರಮ
ಸುದ್ದಿ ಸಂಗ್ರಹ ನಾಲವಾರ ಗುರುಪೂರ್ಣಿಮೆ ನಿಮಿತ್ತ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಗುರುವಂದನಾ ಕಾರ್ಯಕ್ರಮ ಜುಲೈ 29ರಂದು ಬುಧವಾರ ಕಲಬುರಗಿ ನಗರದಲ್ಲಿ ಆಯೋಜಿಸಲಾಗಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಕಲಬುರಗಿಯ ಕರುಣೇಶ್ವರ ನಗರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನದ ಶಾಖಾಮಠದಲ್ಲಿ ಬುಧವಾರ ಸಂಜೆ 5 ಗಂಟೆಗೆ ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ ಎಂದರು. ಗುರುವಂದನೆ ನಿಮಿತ್ತ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ನಂತರ ಪರಮಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ […]
Continue Readingಎಎಸ್ಡಿಡಿ ಪಟ್ಟಿ ಪರಿಶೀಲನೆಗೆ ಸೂಚನೆ, ಸಕ್ರಿಯವಾಗಿ ಭಾಗವಹಿಸಲು ಮನವಿ
ಸುದ್ದಿ ಸಂಗ್ರಹ ಕಲಬುರಗಿಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಏಜೆಂಟರು ಮತ್ತು ಮತದಾರರು ಸಕ್ರಿಯವಾಗಿ ಭಾಗವಹಿಸಬೇಕು. ಗೈರು, ಸ್ಥಳಾಂತರ, ಮರಣ, ಎರಡು ಕಡೆ ಹೆಸರು ಇರುವುದರ (ಎಎಸ್ಡಿಡಿ) ಬಗ್ಗೆಯೂ ಹೆಚ್ಚು ಗಮನಹರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಇಕ್ರಂ ಶರೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ 2,59,949 ಮತದಾರರನ್ನು ಗೈರು, ಸ್ಥಳಾಂತರ, ನಿಧನ ಮತ್ತು ಎರಡು ಕಡೆ ಹೆಸರು ಇರುವವರು ಎಂದು ಬಿಎಲ್ಒಗಳು ವರ್ಗೀಕರಿಸಿದ್ದಾರೆ. ಕ್ಷೇತ್ರ ಪರಿಶೀಲನೆ ಸಂದರ್ಭದಲ್ಲಿ ಮತ್ತು ಲಭ್ಯವಿರುವ ದಾಖಲೆಗಳ […]
Continue Readingಕನ್ನಡಪ್ರಭ ವರದಿಗಾರ ಶಿವಕುಮಾರ ಕುಸಾಳೆ ಅವರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ
ಸುದ್ದಿ ಸಂಗ್ರಹ ಶಹಾಬಾದ್ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಕನ್ನಡಪ್ರಭ ದಿನಪತ್ರಿಕೆಯ ಹಿರಿಯ ವರದಿಗಾರ ಶಿವಕುಮಾರ ಕುಸಾಳೆ ಅವರು ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಿಖರ ವರದಿಗಾರಿಕೆ, ಸಾಮಾಜಿಕ ಸಮಸ್ಯೆಗಳನ್ನು ಬೆಳಕಿಗೆ ತರುವ ನಿಷ್ಠೆ ಮತ್ತು ಜನಪರ ಕಾಳಜಿ ಮೂಲಕ ಶಿವಕುಮಾರ ಕುಸಾಳೆ ಅವರು ಹಲವು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಭಾಗದ ಸಮಸ್ಯೆಗಳು, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳು, ಆಡಳಿತಾತ್ಮಕ ಲೋಪಗಳು […]
Continue Readingಉದಯವಾಣಿ ವರದಿಗಾರ ಎಂ.ಡಿ ಮಶಾಕ್ ಅವರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ
ಸುದ್ದಿ ಸಂಗ್ರಹ ಚಿತ್ತಾಪುರಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡ ಮಾಡುವ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಉದಯವಾಣಿ ದಿನಪತ್ರಿಕೆಯ ಹಿರಿಯ ವರದಿಗಾರ ಎಂ.ಡಿ ಮಶಾಕ್ ಅವರು ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಿಖರ ವರದಿಗಾರಿಕೆ, ಸಾಮಾಜಿಕ ಸಮಸ್ಯೆಗಳನ್ನು ಬೆಳಕಿಗೆ ತರುವ ನಿಷ್ಠೆ ಮತ್ತು ಜನಪರ ಕಾಳಜಿ ಮೂಲಕ ಎಂ.ಡಿ ಮಶಾಕ್ ಅವರು ಹಲವು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಭಾಗದ ಸಮಸ್ಯೆಗಳು, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳು, ಆಡಳಿತಾತ್ಮಕ ಲೋಪಗಳು ಮತ್ತು […]
Continue Readingಶಹಾಬಾದ್: ಜೀನಿಯಸ್ ಶಾಲೆಯ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ
ಸುದ್ದಿ ಸಂಗ್ರಹ ಶಹಾಬಾದ್ನಗರದ ಜೀನಿಯಸ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಪುಟ್ಟ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಸಂಭ್ರಮ, ಸಡಗರದಿಂದ ನಡೆಯಿತು. ಇಂದಿನ ಧಾವಂತ ಯುಗದಲ್ಲಿ ಕಣ್ಮರೆಯಾಗುತ್ತಿರುವ ಭಾರತೀಯ ಸಂಸ್ಕೃತಿ ಮತ್ತು ಕುಟುಂಬ ಮೌಲ್ಯಗಳು ಮಕ್ಕಳಲ್ಲಿ ಬಾಲ್ಯದಲ್ಲೆ ಬಿತ್ತಿ ಬೆಳೆಸುವ ಉದ್ದೇಶದಿಂದ ವೇಷಭೂಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ ಶಾಲೆಯ ಪುಟ್ಟ ಕಂದಮ್ಮಗಳು ‘ಅವಿಭಕ್ತ ಕುಟುಂಬ’ದ ವಿಶಿಷ್ಟ ಮಾದರಿಯ ವೇಷಭೂಷಣ ಧರಿಸಿ ಎಲ್ಲರ ಗಮನ ಸೆಳೆದರು. ಮಕ್ಕಳು ಅಜ್ಜ, ಅಜ್ಜಿ, ತಂದೆ, ತಾಯಿ, ದೊಡ್ಡಪ್ಪ, ದೊಡ್ಡಮ್ಮ, ಚಿಕ್ಕಪ್ಪ, ಚಿಕ್ಕಮ್ಮ ಮತ್ತು ಅಣ್ಣ- […]
Continue Readingಐವರು ಪತ್ರಕರ್ತರಿಗೆ ಕಾಗಲಕರ್ ಪ್ರಶಸ್ತಿ
ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ವಿ.ಎನ್ ಕಾಗಲಕರ್ ಪ್ರಶಸ್ತಿಗೆ ಐವರು ಹಿರಿಯ ಪತ್ರಕರ್ತರು ಮತ್ತು ವಾರ್ಷಿಕ ಪ್ರಶಸ್ತಿಗೆ 25 ಪತ್ರಕರ್ತರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಜಕುಮಾರ ಉದನೂರ್ ತಿಳಿಸಿದ್ದಾರೆ. ಹಿರಿಯ ಪತ್ರಕರ್ತರಾದ ಪ್ರಭಾಕರ ಜೋಶಿ, ಚಂದ್ರಶೇಖರ ಕೌಲಗಾ, ಪ್ರವೀಣರೆಡ್ಡಿ, ದೇವಿಂದ್ರಪ್ಪ ಅವಂಟಿ ಮತ್ತು ಚಂದ್ರಕಾಂತ ಹುಣಸಗಿ ಅವರನ್ನು ವಿ.ಎನ್ ಕಾಗಲಕರ್ ಪ್ರಶಸ್ತಿಗೆ ಆಯ್ಕೆ […]
Continue Readingಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ
ಸುದ್ದಿ ಸಂಗ್ರಹ ನವದೆಹಲಿಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ. ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇಂದು ಸಂಜೆ ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿ ದೃಢಪಡಿಸಿದೆ. ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಲ್ಹಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಸದ್ಯ ಆಹಾರ ಮತ್ತು ನಾಗರಿಕ […]
Continue Reading