ಬೆಂಗಳೂರು: ಬೇಸಿಗೆಯಲ್ಲಿ ರಾಜ್ಯದ ವಿವಿಧೆಡೆ ವರ್ಷಧಾರೆಯಾಗಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಸುಮಾರು 10 ನಿಮಿಷಗಳ ಕಾಲ ಮಳೆಯಾಗಿದೆ, ಜನರು ಹರ್ಷಗೊಂಡಿದ್ದಾರೆ.
ಹೊಸಪೇಟೆಯಲ್ಲೂ ಮೇಘರಾಜ ತಂಪು ಸೂಸಿದ್ದಾನೆ. ವರ್ಷದ ಮೊದಲ ಮಳೆಯಲ್ಲಿ ಮಕ್ಕಳು ಖುಷಿಯಿಂದ ಆಟವಾಡಿದ್ದಾರೆ. ಹಾವೇರಿಯಲ್ಲಿ ಮಳೆಯಿಂದ ಸಾಕಷ್ಟು ಅವಾಂತರವಾಗಿದೆ. ಬಾಲಕರ ಹಾಸ್ಟೆಲ್ಗೆ ನೀರು ನುಗ್ಗಿದೆ. ದಾವಣಗೆರೆ, ಬಾಗಲಕೋಟೆಯಲ್ಲೂ ಕೆಲವೆಡೆ ತುಂತುರು ಮಳೆಯಾಗಿದೆ.
ದಾವಣಗೆರೆಯಲ್ಲಿ ವರ್ಷಧಾರೆಯಾಗಿದೆ, ತುಂತುರು ಮಳೆಯಿಂದ ನೆಮ್ಮದಿಯ ನಿಟ್ಟಿಸಿರು ಬಿಟ್ಟಿದ್ದಾರೆ. ಜಿಲ್ಲೆಯ ಹೆಬ್ಬಾಳ, ಅನಗೋಡು ಸೇರಿದಂತೆ ಹಲವು ಕಡೆ ಮಳೆಯಾಗಿದೆ, ರೈತರು ನಿಟ್ಟುಸಿರು ಬಿಟ್ಟಂತಾಗಿದೆ.