ಕಲಬುರಗಿ: ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಜನ ಖೈದಿಗಳು ಬಿಡುಗಡೆಯಾಗಿದ್ದಾರೆ.
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಾಬಣ್ಣ ಬನಾರ್, ಖಾಜಾಸಾಬ್, ಶಿವಶಂಕರ, ಬಸವರಾಜ, ರವಿ, ಬೀರಪ್ಪ ಮತ್ತು ಅಬಿದಾ ಬೇಗಂ ಬಿಡುಗಡೆಯಾಗಿದ್ದಾರೆ.
ಜೈಲಿನಲ್ಲಿ ಉತ್ತಮ ನಡತೆ ತೋರಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಅವಧಿ ಪೂರ್ವ ಬಿಡುಗಡೆ ಮಾಡಿದೆ. ಕಾರಾಗೃಹ ಡಿಜಿ ನಿರ್ದೇಶನದ ಮೇರೆಗೆ ಕಲಬುರಗಿ ಜೈಲು ಅಧೀಕ್ಷಕಿ ಆರ್ ಅನಿತಾ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.