ಸರ್ ಸಿ.ವಿ ರಾಮನ್ ಪ್ರತಿಯೊಬ್ಬ ಭಾರತೀಯರ ಹೆಮ್ಮೆಯ ಪ್ರತೀಕ: ಸುಗುಣಾ ಕೊಳಕೂರ

ಗ್ರಾಮೀಣ

ಚಿತ್ತಾಪುರ: ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊದಲ ವಿಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದವರು ಸರ್ ಸಿ.ವಿ ರಾಮನ್. ಇವರು ಪ್ರತಿಯೊಬ್ಬ ಭಾರತೀಯರ ಹೆಮ್ಮೆ ಎಂದು ವಿಜ್ಞಾನ ಶಿಕ್ಷಕಿ ಸುಗುಣಾ ಕೊಳಕೂರ ಹೇಳಿದರು.

ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 28 ಫೆಬ್ರುವರಿ 1928 ರಂದು ಭೌತಶಾಸ್ತ್ರದ ಅತಿದೊಡ್ಡ ಆವಿಷ್ಕಾರವಾದ ರಾಮನ್ ಪರಿಣಾಮ ಜಗತ್ತಿಗೆ ಪರಿಚಯಿಸಿದ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ. 1930ರಲ್ಲಿ ರಾಮನ್ ಪರಿಣಾಮಕ್ಕೆ ನೊಬೆಲ್ ಪ್ರಶಸ್ತಿ ದೊರೆಯಿತು. ಪ್ರತಿಯೊಬ್ಬರು ವಿಜ್ಞಾನದಲ್ಲಿ ಆಸಕ್ತಿ ಹೊಂದಬೇಕು. ವೈಜ್ಞಾನಿಕ ದೃಷ್ಟಿಕೋನ ಬೆಳೆಸಿಕೊಳ್ಳಬೇಕು. ಮಕ್ಕಳು ಸಂಶೋಧನೆ ಕಡೆಗೆ ಹೆಚ್ಚು ಆಸಕ್ತಿ ವಹಿಸುತ್ತಿಲ್ಲ ಎನ್ನುವ ಕೊರಗೂ ಇದೆ. ದೇಶದಲ್ಲಿ ಆವಿಷ್ಕಾರ. ಸಂಶೋಧನೆಗಳಿಗೆ ಪೂರಕ ವಾತಾವರಣವಿದೆ ಎಂದರು.

28 ಫೆಬ್ರುವರಿ1987 ರಿಂದ ದೇಶದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಎಂದು ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷ ಈ ದಿನವನ್ನು ಒಂದು ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಈ ವರ್ಷದ ಧ್ಯೇಯ ವಾಕ್ಯ: ವಿಕಸಿತ ಭಾರತಗಾಗಿ ವಿಜ್ಞಾನ ಮತ್ತು ಆವಿಷ್ಕಾರದಲ್ಲಿ ಜಾಗತಿಕ ನಾಯಕತ್ವಕ್ಕಾಗಿ ಭಾರತೀಯ ಯುವಕರನ್ನು ಸಬಲೀಕರಣಗೊಳಿಸುವದಾಗಿದೆ ಎಂದರು.

ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಗುರು ವಿದ್ಯಾಧರ ಖಂಡಾಳ, ಶಿಕ್ಷಕರಾದ ಈಶ್ವರಗೌಡ ಪಾಟೀಲ್, ಗೀತಾ ಜಮಾದಾರ, ಸುವರ್ಣ ಮಠಪತಿ, ಗಂಗಪ್ಪ ಕಟ್ಟಿಮನಿ, ವಿಜಯಲಕ್ಷ್ಮಿ ಬಮ್ಮನಳ್ಳಿ, ಸಿದ್ದಲಿಂಗ ಬಾಳಿ, ಶರಣಬಸಪ್ಪ ಸಜ್ಜನ್, ರವಿ ಕಾಣೆಕರ್, ಶಿವಲೀಲಾ ಕಂಠಿಕಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *