ಬೆಂಗಳೂರು: ಸಮುದ್ರದ ಎರಡು ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ, ಸ್ಪಷ್ಟ ಚಂಡಮಾರುತ ಪರಿಚಲನೆ ದಾಖಲಾಗಿದೆ. ಈ ಕಾರಣದಿಂದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 05 ದಿನಗಳ ಕಾಲ (ಏಪ್ರಿಲ್ 8 ರವರೆಗೆ) ಗುಡುಗು ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆ ಅಬ್ಬರಿಸಲಿದೆ.
ಕರ್ನಾಟಕದಲ್ಲಿ ಇಂದಿನಿಂದ ಏಪ್ರಿಲ್ 6ರವರೆಗೆ (ಗುರುವಾರ-ರವಿವಾರ) 21 ಜಿಲ್ಲೆಗಳಿಗೆ ಭಾರಿ ಮಳೆ ಪ್ರಯುಕ್ತ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ರಾಜ್ಯದಲ್ಲಿ ಕೆಲವೆಡೆ ಬಿಸಿಲಿನ ತಾಪ ಹೆಚ್ಚಾಗಿತ್ತು, ಈ ಮಧ್ಯೆ ಬದಲಾದ ಹವಾಮಾನ ವೈಪರಿತ್ಯದ ಪ್ರಭಾವದಿಂದಾಗಿ ಸಾಧಾರಣದಿಂದ ಭಾರಿ ಮಳೆ ಆರ್ಭಟಿಸಲಿದೆ. ಪೂರ್ವ ಮುಂಗಾರು ಮಳೆ ಮತ್ತಷ್ಟು ಚುರುಕಾಗಲಿದೆ. ಕೆಲವೆಡೆ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಅಬ್ಬರಿಸಲಿದೆ. ಸದರಿ ವರ್ಷ ಈವರೆಗೆ ಬಂದ್ ಪೂರ್ವ ಮುಂಗಾರು ಪೈಕಿ ಮುಂದಿನ 03 ದಿನ ಅಬ್ಬರಿಸುವ ಮಳೆ, ಅತ್ಯಧಿಕ ಮಳೆ ಎಂದು ಊಹಿಸಲಾಗಿದೆ.
3.6 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಬಿರುಗಾಳಿ
ಲಕ್ಷದ್ವೀಪ ವ್ಯಾಪ್ತಿಯ ಸಮುದ್ರ 0.9 ಕಿಲೋ ಮೀಟರ್ ಎತ್ತರದಲ್ಲಿ ಹಾಗೂ ಕೊಮೆರಿಯನ್ ಪ್ರದೇಶಗಳಲ್ಲಿ 3.6 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಗಾಳಿ ಸೃಷ್ಟಿಯಾಗಿದೆ. ಕೆಲವು ಗಂಟೆಗಳ ಹಿಂದೆ ವಾಯುಭಾರ ಕುಸಿತಗೊಂಡಿದ್ದು, ಇದೀಗ ಸ್ಪಷ್ಟ ಚಂಡಮಾರುತವಾಗಿ ಬದಲಾಗಿದೆ. ಈ ಕಾರಣದಿಂದ ದಕ್ಷಿಣ ಭಾರತದ 3-4 ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದಲ್ಲೂ ಸೈಕ್ಲೋನ್ ಎಫೆಕ್ಟ್ ಅತ್ಯಧಿಕ ಪ್ರಮಾಣದಲ್ಲಿ ಉಂಟಾಗಲಿದೆ.
ಯೆಲ್ಲೋ ಅಲರ್ಟ್ ಜಿಲ್ಲೆಗಳು ಯಾವುವು ?
ರಾಜ್ಯದಲ್ಲಿ ಭಾರಿ ಮಳೆಯಾಗುವ ಜಿಲ್ಲೆಗಳನ್ನು ನೋಡುವುದಾರೆ, ಏಪ್ರಿಲ್ 6ರವರೆಗೆ ಕೆಲವೆಡೆ 2 ದಿನ, ಕೆಲವು ಭಾಗಗಳಲ್ಲಿ 3 ದಿನಗಳ ಕಾಲ ನಿರಂತರವಾಗಿ ಮಳೆಯಾಗಲಿದೆ. ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಒಂದೆ ದಿನ ಭಾರಿ ಮಳೆಯಾಗಲಿದೆ. ಹೀಗಾಗಿ ಒಟ್ಟು 21 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಿರುವದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಚಿತ್ರದುರ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕನಿಷ್ಠ ಒಂದರಿಂದ ಮೂರು ದಿನಗಳ ಕಾಲ ಬೇರೆ ಬೇರೆ ಸಮಯದಲ್ಲಿ ಜೋರು ಗಾಳಿ ಸಹಿತ ಭಾರಿ ಮಳೆಯಾಗಲಿದೆ. ಕೆಲವೆಡೆ ಆಲಿಕಲ್ಲು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿ.ಮೀ ಏರಿಕೆ
ರಾಜ್ಯದ ಒಳನಾಡಿನಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಮಳೆ ಆಗಮನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತಂಪು ವಾತಾವರಣ ಕಂಡು ಬರಲಿದೆ. ಈಗಾಗಲೇ ಬುಧವಾರದಿಂದ ವಿವಿಧ ಜಿಲ್ಲೆಗಳಲ್ಲಿ ರಾತ್ರಿ ತಂಪು ಗಾಳಿ ಬೀಸಲು ಆರಂಭಿಸಿದೆ. ಇನ್ನೂ ತಾಪಮಾನದಲ್ಲಿ 3-4 ಡಿಗ್ರಿ ಸೆಲ್ಸಿಯಸ್ ಕುಸಿತವಾಗುವ ಸಾಧ್ಯತೆ ಇದೆ. ಬಿಸಿಲಿನಿಂತ ತತ್ತರಿಸಿದ ರಾಜ್ಯದ ಕರಾವಳಿ, ಒಳನಾಡು ಹಾಗೂ ಮಲೆನಾಡು ಭಾಗದ ಜನರಿಗೆ ಮುಂದಿನ ಒಂದು ವಾರ ನಿಟ್ಟುಸಿರು ಬಿಡುವಂತಾಗಲಿದೆ.