ಬೆಳಗಾವಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡಿದವರ ವಿರುದ್ಧ ಎಫ್ಐಆರ್ ದಾಖಲಿಸದೆ ಬಿಟ್ಟು ಕಳುಹಿಸಿದ್ದಕ್ಕೆ ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಿ ಎಸ್ಪಿ ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ.
ಜೂ.26 ರಂದು ಶ್ರೀರಾಮಸೇನೆ ಕಾರ್ಯಕರ್ತರು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು.
ಪಿಎಸ್ಐ ನಿಖಿಲ್ ಕಾಂಬ್ಳೆ ಅಕ್ರಮವಾಗಿ ಗೋವು ಸಾಗಣೆ ಸಂಬಂಧ ಕೇಸ್ ದಾಖಲಿಸದೆ ಅವರನ್ನು ಬಿಟ್ಟು ಕಳುಹಿಸಿದ್ದರು. ಅಲ್ಲದೆ ಮೇಲಾಧಿಕಾರಿಗಳ ಗಮನಕ್ಕೂ ತಂದಿರಲಿಲ್ಲ. ಪೊಲೀಸ್ ಠಾಣೆಗೆ ಬಂದ ಶ್ರೀರಾಮಸೇನೆ ಕಾರ್ಯಕರ್ತರಲ್ಲಿ ಗಡಿಪಾರಾದ ರೌಡಿಶೀಟರ್ ಮಹಾವೀರ ಸೊಲ್ಲಾಪುರೆ ಕೂಡ ಇದ್ದನು. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಪಿಎಸ್ಐ ನಿಖಿಲ್ ಕಾಂಬ್ಳೆ ಅವರನ್ನು ಅಮಾನತುಗೊಳಿಸಲಾಗಿದೆ.