ಕಲಬುರಗಿ: ಜಿಲ್ಲೆಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವಾಗ ಅಪಘಾತವಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿಬ್ಬಂದಿಗಳಿಗೆ ಸರ್ಕಾರದಿಂದ ವಿನಾಯಿತಿ ನೀಡಬೇಕು ಮತ್ತು ಚಿಕಿತ್ಸಾ ವೆಚ್ಚ ಭರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಮನವಿ ಪತ್ರ ಸಲ್ಲಿಸಿದೆ.
ಕ.ರಾ.ಸ.ನೌ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಅಪಘಾತಕ್ಕಿಡಾದ ಸಿಬ್ಬಂದಿಗಳಿಗೆ ಸಮೀಕ್ಷಾ ಕಾರ್ಯದಿಂದ ವಿನಾಯಿತಿ ನೀಡಬೇಕು ಮತ್ತು ಅವರ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಬೇಕು ಎಂದು ಒತ್ತಾಯಿಸಲಾಯಿತು.

ಅಪರ ಜಿಲ್ಲಾಧಿಕಾರಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅಪಘಾತಕ್ಕೀಡಾದ ಸಿಬ್ಬಂದಿಗಳ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ತರಿಸಿಕೊಂಡು, ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಚಿಕಿತ್ಸಾ ವೆಚ್ಚ ಒದಗಿಸುವ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಮತ್ತು ಸಮೀಕ್ಷಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗೆ ಅನಾವಶ್ಯಕವಾಗಿ ತೊಂದರೆ ನೀಡದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಹೇಶ ಹೂಗಾರ, ರಾಜ್ಯಪರಿಷತ್ ಸದಸ್ಯ ಧರ್ಮರಾಯ ಜವಳಿ, ಕಾರ್ಯಾಧ್ಯಕ್ಷ ಚಂದ್ರಕಾಂತ ಏರಿ, ಉಪಾಧ್ಯಕ್ಷ ಎಂ.ಬಿ ಪಾಟೀಲ, ಪದಾಧಿಕಾರಿಗಳಾದ ಸಂಜೀವ ಬಗಲಿ, ಸಂಗಣ್ಣ ಜಾಬಾ, ಸಂತೋಷ ಗಂಗು, ಶಶಿಕಾಂತ್ ಹೊಳ್ಕರ್, ಗುರುಶರಣ, ಮಹೇಶ್ ಬಸರಕೋಡ, ರಾಜಶೇಖರ ಕುರಿಕೋಟಾ, ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಜಮೀಲ್ ಇಮ್ರಾನ್, ಮಲ್ಲಿಕಾರ್ಜುನ. ಮುರಳಿಧರ ತೊಣಪೆ, ರಾಜೇಶ್ ನೀಲಹಳ್ಳಿ, ಸತೀಶ್ ಜಾಮಗೊಂಡ, ವಿಜಯಕುಮಾರ ಪಾಟೀಲ, ಚನ್ನಬಸಪ್ಪ ಬಿರಾದಾರ್, ಸೂರ್ಯಕಾಂತ್, ಪರಮೇಶ್ವರ ದೇಸಾಯಿ, ದೇವೇಂದ್ರಪ್ಪ ಗಣಮುಖಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.