ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡು ಕಾಲು ಕಟ್: ಇಬ್ಬರ ಸ್ಥಿತಿ ಗಂಭೀರ

ಜಿಲ್ಲೆಯ

ಸುದ್ದಿ ಸಂಗ್ರಹ ಬೀದರ್
ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೊರ್ವನ ಎರಡು ಕಾಲು ಕಟ್ ಆಗಿದ್ದು, ಇಬ್ಬರ ಕಾಲಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಥೇರು ಮೈದಾನದಲ್ಲಿ ನಡೆದಿದೆ.

ಶ್ರೀ ಬಸವೇಶ್ವರ ಜಾತ್ರಾ ರಥದಡಿ ಸಿಲುಕಿ ಧನರಾಜ್ ಎಂಬುವವರ ಎರಡು ಕಾಲು ಕತ್ತರಿಸಿದೆ. ಇಬ್ಬರು ವ್ಯಕ್ತಿಗಳ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಭೀಮಾಶಂಕರ ಎಂಬಾತನಿಗೆ ಸಣ್ಣಪುಟ್ಟ ಗಾಯವಾಗಿದೆ.

ಬಸವಕಲ್ಯಾಣದಲ್ಲಿ ಶ್ರೀ ಬಸವೇಶ್ವರ ಜಾತ್ರಾ ರಥೋತ್ಸವ ನಡೆಯುತ್ತಿತ್ತು. ಲಕ್ಷಾಂತರ ಭಕ್ತ ಸಮೂಹ ಥೇರು ನೋಡಲು ಆಗಮಿಸಿತ್ತು. ಈ ವೇಳೆ ರಥ ನಿಯಂತ್ರಣ ಕಳೆದುಕೊಂಡಿದ್ದು, ಕೆಲವರ ಕಾಲಿನ ಮೇಲೆ ಹರಿದು ಹೋಗಿದೆ.

ಉತ್ಸಾಹದಿಂದ ರಥ ಎಳೆಯಲು ಬಸವಭಕ್ತರು ಮುಂದಾಗಿದ್ದು, ಈ ವೇಳೆ ಏಕಾಏಕಿ ನುಕಾಟ ತಳ್ಳಾಟ ಆಗಿದ್ದರಿಂದ ಘಟನೆ ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಬಸವಕಲ್ಯಾಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಒರ್ವ ಗಾಯಾಳುವನ್ನು ಕಲಬುರಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Leave a Reply

Your email address will not be published. Required fields are marked *