ಸುದ್ದಿ ಸಂಗ್ರಹ ಜನವಾಡ
ಮನೆಯ ಮ್ಯುಟೇಶನ್ ನೀಡಲು 2.50 ಲಕ್ಷ ರೂ ಲಂಚ ಪಡೆಯುತ್ತಿದ್ದ ಬೀದರ್ ತಾಲೂಕಿನ ಮರಕುಂದಾ ಗ್ರಾಮ ಆಡಳಿತಾಧಿಕಾರಿ ಶಿವಕುಮಾರ ಅವರ ಸಹಚರ ಶರಣಯ್ಯ ಸ್ವಾಮಿ ಮಂಗಳವಾರ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ಮರಕುಂದಾ ಗ್ರಾಮದ ಮಹಾದೇವ ಶಾಂತಪ್ಪ ಅವರು ಮನೆಯ ಮ್ಯುಟೇಶನ್ಗಾಗಿ ಗ್ರಾಮ ಆಡಳಿತಾಧಿಕಾರಿ ಸಂಪರ್ಕಿಸಿದ್ದರು. ಇದಕ್ಕಾಗಿ ಶಿವಕುಮಾರ ಹಾಗೂ ಶರಣಯ್ಯ ಸ್ವಾಮಿ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮಹಾದೇವ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಮರಕುಂದಾ ಗ್ರಾಮದ ಹೊರವಲಯದ ಧಾಬಾದಲ್ಲಿ ಮಹಾದೇವ ಅವರಿಂದ ಮುಂಗಡವಾಗಿ 2.5 ಲಕ್ಷ ರೂ ಲಂಚ ಪಡೆಯುತ್ತಿದ್ದಾಗ ಆರೋಪಿಗಳನ್ನು ವಶಕ್ಕೆ ಪಡೆದರು.
ಲೋಕಾಯುಕ್ತ ಡಿವೈಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಿ.ಐ ಅರ್ಜುನಪ್ಪ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.