5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್: ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ

ಜಿಲ್ಲೆ

ಸುದ್ದಿ ಸಂಗ್ರಹ ಯಾದಗಿರಿ
ಕಳೆದ 8 ವರ್ಷಗಳಿಂದ ಪರಸ್ಪರ ಪ್ರೀತಿಸಿ, ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿಯೊಂದು ಈಗ ಬೀದಿಪಾಲಾಗಿದೆ. ಪ್ರಿಯಕರನಿಗೆ ಕೈಕೊಟ್ಟು ಬೇರೆ ಯುವಕನೊಂದಿಗೆ ಮದುವೆಯಾಗಲು ಸಜ್ಜಾಗಿರುವ ಲೇಡಿ ಕಾನ್ಸ್‌ಟೇಬಲ್ ವಿರುದ್ಧ ಪಿಎಸ್ಐ ಒಬ್ಬರು ರಾಯಚೂರು ಎಸ್ಪಿ ಮೊರೆ ಹೋಗಿದ್ದಾರೆ. ಯಾದಗಿರಿಯ ಶಹಾಪುರದಲ್ಲಿ ಗುಪ್ತಚರ ಇಲಾಖೆಯಲ್ಲಿ ಪಿಎಸ್ಐ ಆಗಿರುವ ವಿರೇಶ್ ಮತ್ತು ಕಾನ್ಸ್‌ಟೇಬಲ್ ವಿಜಯಶ್ರೀ 2017 ರಿಂದ ಪ್ರೀತಿಸುತ್ತಿದ್ದರು. ವಿಜಯಪುರದಲ್ಲಿ ವಿದ್ಯಾಭ್ಯಾಸ ಮಾಡುವಾಗ ಇಬ್ಬರ ನಡುವೆ ಸ್ನೇಹ ಬೆಳೆದು ಪ್ರೀತಿಗೆ ತಿರುಗಿತ್ತು.

ವಿರೇಶ್ ಪಿಎಸ್ಐ ಆಗಿ ನೇಮಕಗೊಂಡ ಬಳಿಕ, ವಿಜಯಶ್ರೀ ಕೂಡ ಕಾನ್ಸ್‌ಟೇಬಲ್ ಆಗಿ ಕೆಲಸಕ್ಕೆ ಸೇರಿದ್ದರು. ರಾಯಚೂರು ಗ್ರಾಮೀಣ ಠಾಣೆಯಲ್ಲಿ ಕೆಲಸ ಮಾಡುವಾಗ ಇಬ್ಬರು ನಾಲ್ಕು ವರ್ಷಗಳ ಕಾಲ ಒಂದೆ ಮನೆಯಲ್ಲಿ ಒಟ್ಟಿಗೆ ವಾಸವಿದ್ದರು. ಅಷ್ಟೆ ಅಲ್ಲದೆ ದೇವಸ್ಥಾನವೊಂದರಲ್ಲಿ ಹಾರ ಬದಲಾಯಿಸಿಕೊಂಡು ಮದುವೆಯಾಗಿದ್ದರು ಎಂದು ವಿರೇಶ್ ಹೇಳಿದ್ದಾರೆ.

ವಿಜಯಶ್ರೀ ನನ್ನಿಂದ ಸುಮಾರು 35 ಲಕ್ಷ ರೂ‌ ಹಣ ಪಡೆದಿದ್ದಾಳೆ. ಎರಡು ಬಾರಿ ಗರ್ಭಿಣಿಯಾಗಿದ್ದಾಗ ನನಗೆ ತಿಳಿಯದಂತೆ ಅಬಾರ್ಷನ್ ಮಾಡಿಸಿದ್ದಾಳೆ. ಈಗ ಅಧಿಕೃತವಾಗಿ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಳ್ಳೋಣ ಅಂದಾಗ ಜಾತಿಯ ನೆಪ ಹೇಳಿ ಬೇರೆ ಯುವಕನ ಜೊತೆ ಮದುವೆಗೆ ಸಜ್ಜಾಗಿದ್ದಾಳೆ” ಎಂದು ವಿರೇಶ್ ಆರೋಪಿಸಿದ್ದಾರೆ.

ವಿಜಯಶ್ರೀ ಅವರ ಮದುವೆ ಇದೆ ಮೇ 7 ರಂದು ರಾಯಚೂರಿನಲ್ಲಿ ನಿಶ್ಚಯವಾಗಿದೆ. ತನಗೆ ನ್ಯಾಯ ಸಿಗಬೇಕು ಮತ್ತು ಈ ಮದುವೆ ನಡೆಯಬಾರದು ಎಂದು ವಿರೇಶ್ ಈಗ ಆನ್‌ಲೈನ್ ಮೂಲಕ ದೂರು ನೀಡಿದ್ದು, ಮಾಧ್ಯಮದ ಮುಂದೆ ಅಳಲು ತೋಡಿಕೊಂಡಿದ್ದಾರೆ. ಇಬ್ಬರು ಒಂದೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಈ ಪ್ರೀತಿ ಮತ್ತು ವಂಚನೆಯ ಪ್ರಕರಣವು ಈಗ ಹಾದಿಬೀದಿ ಹೈಡ್ರಾಮಾದಂತಾಗಿ ಇಲಾಖೆಗೆ ಮುಜುಗರ ತಂದಿದೆ.

Leave a Reply

Your email address will not be published. Required fields are marked *