ಉಸಿರಿಗಾಗಿ ಪರಿಸರ ಸಂರಕ್ಷಿಸಿ: ಶಂಕರ ಡಾಂಗೆ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಚಿತ್ತಾಪುರ
ಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದು ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರ ಡಾಂಗೆ ಹೇಳಿದರು.

ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಎನ್’ಸಿಸಿ ಘಟಕದ ಹಾಗೂ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ. ಹಸಿರು ವಾತಾವರಣ ಮಾಯವಾಗುತ್ತಿದೆ. ಹಲವು ರೀತಿಯ ಮಾಲಿನ್ಯಗಳಿಂದ ಪರಿಸರ ಹಾಳುಮಾಡುತ್ತೆವೆ. ಇಂತಹ ಅನೇಕ ಸವಾಲುಗಳನ್ನು ಎದುರಿಸಬೇಕಾದರೆ ಪರಿಸರದಲ್ಲಿ ಮರಗಳ ಸಂಖ್ಯೆ ಹೆಚ್ಚಾಗಬೇಕು. ಪ್ರತಿಯೊಬ್ಬರು ಕನಿಷ್ಠ ಒಂದು ಮರವಾದರೂ ಬೆಳೆಸಬೇಕು ಮತ್ತು ಶಾಲೆಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕಿದೆ ಎಂದರು.

ಶಿಕ್ಷಕ ಸಿದ್ದಲಿಂಗ ಬಾಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ನೂರು ಸಸಿಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಹಾಗೆ ಮನೆಯಲ್ಲಿ ಸಸಿ ನೆಡಲು ಜಾಗವಿರುವ ಮಕ್ಕಳಿಗೆ ಹಣ್ಣಿನ ಸಸಿಗಳನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ರಾವೂರ ಸಿಆರ್’ಪಿ ಅಂಬಾದಾಸ್, ಮುಖ್ಯಗುರು ವಿದ್ಯಾಧರ ಖಂಡಾಳ, ದೈಹಿಕ ಶಿಕ್ಷಕ ಶಿವಕುಮಾರ್ ಸರಡಗಿ, ಇಕೋ ಕ್ಲಬ್ ಸಂಯೋಜಕಿ ಸುಗುಣಾ ಕೊಳಕುರ, ಎನ್’ಸಿಸಿ ಅಧಿಕಾರಿ ಶರಣು ಸಜ್ಜನ್, ಪ್ರಮುಖರಾದ ಸೋಮಶೇಖರ್ ಬಾಳಿ, ವಿಜಯಲಕ್ಷ್ಮಿ ಬಮ್ಮನಳ್ಳಿ, ಈರಣ್ಣ ಹಳ್ಳಿ, ರೇಖಾ ಪಾಟೀಲ್, ನಾಗವೇಣಿ ಫರತಾಬಾದ ಸೇರಿದಂತೆ ಎನ್’ಸಿಸಿ ಕೆಡೆಟ್ ಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *