ಸುದ್ದಿ ಸಂಗ್ರಹ ವಾಡಿ
ಶೌರ್ಯ, ಪರಾಕ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಯೊಬ್ಬರಿಗೂ ಸ್ಪೂರ್ತಿಯ ಚಿಲುಮೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾ ದೇಶಪ್ರೇಮಿ. ಕರುನಾಡಲ್ಲಿ ಬ್ರಿಟಿಷರನ್ನು ನಡುಗಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 229ನೇ ಜಯಂತ್ಯುತ್ಸವವನ್ನು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.
ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸಂಗೊಳ್ಳಿ ರಾಯಣ್ಣನ ಹೆಸರು ಕೇಳಿದರೆ ಸಾಕು ಈಗಲೂ ಮೈಯಲ್ಲಿ ದೇಶಭಕ್ತಿಯ ರಕ್ತ ಪುಟಿದೇಳುತ್ತದೆ ಎಂದರು.
ರಾಯಣ್ಣ, ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿದ್ದ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮಳ ಬಲಗೈ ಬಂಟನಾಗಿ, ಪರಕೀಯರ ದಾಳಿಯಿಂದ ಕಿತ್ತೂರ ರಾಜ್ಯವನ್ನು ರಕ್ಷಿಸಲು ಅಂತಿಮ ಕ್ಷಣದವರೆಗೂ ಹೋರಾಟ ನಡೆಸಿದ್ದ ಮಹಾನ್ ಕ್ರಾಂತಿಕಾರಿ ಎಂದರು.
ಈ ಸಂಧರ್ಭದಲ್ಲಿ ಯುವ ಮುಖಂಡ ವಿಠಲ ನಾಯಕ, ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಮುಖಂಡರಾದ ಬಸವರಾಜ ಪಂಚಾಳ, ಭಗವತ ಸುಳೆ, ಗಿರಿಮಲ್ಲಪ್ಪ ಕಟ್ಟಿಮನಿ, ಭೀಮಶಾ ಜೀರೊಳ್ಳಿ,
ಭೀಮರಾವ ದೊರೆ, ಅರ್ಜುನ ಕಾಳೆಕರ, ಶಿವ ನಾಯಕ, ಹರಿ ಗಲಾಂಡೆ, ಅಶೋಕ ಪವಾರ, ರಿಚರ್ಡ್ ಮಾರೆಡ್ಡಿ, ರಾಮುಶೇಠ ರಾಠೋಡ, ರಾಜೇಶ ಅಗ್ರವಾಲ, ಹಣಮಂತ ಚವ್ಹಾಣ, ಕಿಶನ ಜಾಧವ, ಅಂಬದಾಸ ಜಾಧವ, ಶಿವಶಂಕರ ಕಾಶೆಟ್ಟಿ, ಮಲ್ಲಿಕಾರ್ಜುನ ಸಾತಖೇಡ, ಕಾಳಪ್ಪ ಬಿ.ಕೆ, ಕಾಶಿನಾಥ ಶೆಟಗಾರ, ಅಯ್ಯಣ್ಣ ದಂಡೋತಿ, ರವಿ ಜಾಧವ, ಸತೀಶ ಸಾವಳಗಿ, ಆನಂದ ಇಂಗಳಗಿ, ವಿಶ್ವರಾಧ್ಯ ತಳವಾರ, ಪ್ರೇಮ ರಾಠೋಡ, ಸಂಜಯ ರಾಠೋಡ, ಭರತ ರಾಠೋಡ, ಜಯಂತ ಪವಾರ, ಪ್ರಕಾಶ ದಂಡೋತಿ, ಯಂಕಮ್ಮ ಗೌಡಗಾಂವ, ನಿರ್ಮಲಾ ಇಂಡಿ, ಉಮಾಭಾಯಿ ಗೌಳಿ ಮತ್ತು ಶರಣಮ್ಮ ಯಾದಗಿರಿ ಸೇರಿದಂತೆ ಅನೇಕರು ಇದ್ದರು.