ಸಂಗಮೇಶ ಬಾದವಾಡಗಿ, ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ನಾಳೆ

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಕಲಬುರಗಿ
ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಲೇಖಕ ಸಂಗಮೇಶ ಬಾದವಾಡಗಿ ಮತ್ತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಲೇಖಕ ಮಹಿಪಾಲರೆಡ್ಡಿ ಮುನ್ನೂರ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಎಸ್‌ ಪಾಟೀಲ ನರಿಬೋಳ ತಿಳಿಸಿದ್ದಾರೆ.

ದಿ.ಶಾಂತಪ್ಪಾ ಪಾಟೀಲ ನರಿಬೋಳ ಅವರ ಪುಣ್ಯಸ್ಮರಣೆ ಪ್ರಯುಕ್ತ ಸೆ.12 ರಂದು ಬೆಂಗಳೂರಿನ ರಾಜಾಜಿ ನಗರದ ಕಾಯಕ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಲೇಖಕ ಸಂಗಮೇಶ ಬಾದವಾಡಗಿ ಮತ್ತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಲೇಖಕ ಮಹಿಪಾಲರೆಡ್ಡಿ ಮುನ್ನೂರ ಅವರಿಗೆ ‘ಶಾಂತಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

ನಂತರ ವಿವಿಧ ಕ್ಷೇತ್ರದ 20 ಜನ ಸಾಧಕರಿಗೆ ವಿಶೇಷ ಸನ್ಮಾನ ಮಾಡಲಾಗುವುದು ಎಂದರು.

Leave a Reply

Your email address will not be published. Required fields are marked *