ಮಹಾದೇವಿ ಭೀಮನಹಳ್ಳಿ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ

ತಾಲೂಕು

ಚಿತ್ತಾಪುರ: ತಾಲೂಕಿನ ಭೀಮನಹಳ್ಳಿ ಗ್ರಾಮದ ಜಾನಪದ ಕಲಾವಿದೆ ಮಹಾದೇವಿ ಶರಣಪ್ಪ ಹೊಸಮನಿ ಅವರು ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯಧ್ಯಕ್ಷ ವಿಜಯಕುಮಾರ ಸೋನಾರೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ತಿಳಿಸಿದ್ದಾರೆ.

ಜನವರಿ 11 ಮತ್ತು 12 ರಂದು ಬೀದರ್’ನಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ವಿಭಾಗ ಮಟ್ಟದ ತತ್ವಪದ ಸಮಾವೇಶ ಹಾಗೂ ಭಜನಾ ಸ್ಪರ್ಧೆ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದರು.

Leave a Reply

Your email address will not be published. Required fields are marked *