ಎಲ್ಲಾ ಹೀರೋಗೂ ಒಂದು ಟೈಮ್‌ಲೈನ್‌ ಇರುತ್ತದೆ: ರಿಟೈರ್‌ಮೆಂಟ್‌ ಬಗ್ಗೆ ಸುದೀಪ್‌ ಮಾತು

ರಾಜ್ಯ

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಗೆದ್ದ ಸಂಭ್ರಮದಲ್ಲಿದ್ದಾರೆ. ಇದರ ನಡುವೆ ಸುದೀಪ್ ನಿವೃತ್ತಿ ಬಗ್ಗೆ ಮಾತೆತ್ತಿದ್ದಾರೆ. ಎಲ್ಲಾ ಹೀರೋಗೂ ಒಂದು ಟೈಮ್ ಲೈನ್ ಅಂತ ಇರುತ್ತದೆ. ಕೊನೆಗೆ ಅವರು ಬೋರ್ ಆಗಿಬಿಡುತ್ತಾರೆ ಅಂತ ರಿಟೈರ್‌ಮೆಂಟ್ ಬಗ್ಗೆ ಸುದೀಪ್ ಮುಕ್ತವಾಗಿ ಮಾತನಾಡಿದ್ದಾರೆ.

ಸಂದರ್ಶನವೊಂದರಲ್ಲಿ ಸಿನಿಮಾ ಕೆರಿಯರ್ ಬಗ್ಗೆ ಮಾತನಾಡಿದ ಸುದೀಪ್, ಟೆನ್ಶನ್ ಅಂತ ಅಲ್ಲ, ಸುಸ್ತಾಗಬಹುದು. ಆದರೆ ನೀವು ಮಾಡೋದೆಲ್ಲಾ ಕರೆಕ್ಟ್ ಮಾಡಿದ್ರೆ ಎಲ್ಲಿ ಸುಸ್ತಾಗುತ್ತೆ ? ನಮಗೆಲ್ಲರಿಗೂ ವಿಶ್ರಾಂತಿ ಬೇಕು. ಹೊಟ್ಟೆ ಇದೆ ಅಂತಾ ಸಿಕ್ಕಾಪಟ್ಟೆ ತಿನ್ನೊನಲ್ಲ. ನಿದ್ದೆ ಮಾಡೋಕೆ ಹಾಸಿಗೆ ಇದೆ ಅಂತ ಸುಮ್ನೆ ನಿದ್ದೆ ಮಾಡುವನಲ್ಲ. ರಿಟೈರ್‌ಮೆಂಟ್ ಆದ ಮೇಲೆ ರೆಸ್ಟ್ ಇದ್ದೆ ಇರುತ್ತೆ ಅಲ್ವಾ ? ಅಲ್ಲಿಯವರೆಗೂ ಯಾಕೆ ರಿಟೈರ್ ಆಗಬೇಕು. ಕೆಲಸ ಮಾಡೋಣ ಎಂದಿದ್ದಾರೆ.

ಪ್ರತಿಯೊಬ್ಬ ಹೀರೋಗೂ ಒಂದು ಟೈಮ್‌ಲೈನ್ ಅಂತ ಇರುತ್ತದೆ. ಕೊನೆಗೆ ಬೋರ್ ಆಗಿಬಿಡ್ತಾರೆ. ನಮ್ಮಂತವರಿಗೆಲ್ಲಾ ಅಣ್ಣನ ರೋಲ್, ತಮ್ಮನ ರೋಲ್, ಚಿಕ್ಕಪ್ಪ ರೋಲ್ ಸೂಟ್ ಆಗಲ್ಲ. ಮಾಡೋದು ಇಲ್ಲ. ಆಗ ನಮಗೆ ಏನು ಅನಿಸುತ್ತೆ ಅಂದ್ರೆ, ಏನಾದರೂ ಹೊಸದು ಮಾಡಬೇಕು ಅಂತ ಅನಿಸುತ್ತದೆ. ನಾನು ಹೀರೋ ಆಗಿ ಇನೊಬ್ಬರಿಗೆ ಕಾಯಿಸುವನಲ್ಲ, ಸೆಟ್‌ಗೆ ಬೇಗ ಹೋಗಿರುತ್ತೆನೆ. ಇನ್ನೂ ಹೀರೋ ಆಗಿ ಇಳಿದ ಮೇಲೆ ಬೇರೆ ಪಾತ್ರ ಮಾಡೋಕೆ ಹೋಗಿ ಮತ್ತೊಬ್ಬರಿಗೆ ಕಾಯುತ್ತಾ ಇರೊಕೆ ಆಗುತ್ತಾ ? ಎಂದಿದ್ದಾರೆ. ಸೆಟ್‌ಗೆ ಅವರು ಬಂದಿಲ್ಲ. ಇವರು ಬಂದಿಲ್ಲ ಅನ್ನೊದು ನಮಗೆ ಸೂಟ್ ಆಗುತ್ತಾ ? ಎಂದಿದ್ದಾರೆ.

ಮುಂದೆ ಸಿನಿಮಾ ಇನ್ನೂ ಮಾಡಬಹುದು, ನಿರ್ದೇಶನ ಅಥವಾ ನಿರ್ಮಾಣ ಮಾಡಬಹುದು ಗೊತ್ತಿಲ್ಲ. ಸಿನಿಮಾ ನಮಗೆ ಬಹಳ ಹತ್ತಿರವಾಗಿರುವುದರಿಂದ, ಅದರಿಂದ ದೂರ ಆಗ್ತಿನಿ ಅಂತ ಹೇಳೊಕೆ ಆಗಲ್ಲ. ಒಬ್ಬ ನಾಯಕ ನಟನೆಯಿಂದ ದೂರ ಆಗಬಹುದು. ಅದನ್ನ ಇವತ್ತು ಅಟ್ಯಾಚ್‌ಮೆಂಟ್ ಮಾಡಿಕೊಂಡು ಕೂತಿಲ್ಲ. ಪೋಷಕ ನಟನಾಗಿ ಸೈರಾ ನರಸಿಂಹ ರೆಡ್ಡಿ, ‘ದಬಾಂಗ್’ನಲ್ಲಿ ಬೇರೆ ತರಹದ ಪಾತ್ರ ಮಾಡುತ್ತಾ ಇರಲಿಲ್ಲ. ನಾನು ಯಾವತ್ತೂ ಹೀರೋ ಇಮೇಜ್‌ಗೆ ಅಂಟಿಕೊಂಡಿಲ್ಲ. ಆ ಪಾತ್ರಗಳನ್ನ ಮಾಡೊಕೆ ಖುಷಿ ಇದೆ, ತೃಪ್ತಿ ಇದೆ ಎಂದು ಮಾತನಾಡಿರುವ ಸುದೀಪ್ ಮುಂದಿನ ಸಿನಿಮಾ ಕೆರಿಯರ್ ಪ್ಲ್ಯಾನ್‌ ಬಗ್ಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *