ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ದೆಹಲಿ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮುಖಂಡರು ಪರಸ್ಪರ ಸಿಹಿಹಂಚಿ, ಜಯಘೋಷ ಕೊಗಿ ಸಂಭ್ರಮಿಸಿದರು.
ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರಬುದ್ಧ ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಅರಿತು ಬಿಜೆಪಿ ಪಕ್ಷವನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಿದ ಮತದಾರರು ದೇಶಕ್ಕೆ ಅವರ ನಾಯಕತ್ವದ ಅವಶ್ಯಕತೆ ಇದೆ ಎಂದು ಸಾಬೀತು ಪಡಿಸಿದರು ಎಂದರು.
ದೆಹಲಿ ರಾಜ್ಯದಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ. ಈ ಗೆಲುವಿಗೆ ಕಾರಣರಾದ ನಮ್ಮ ರಾಷ್ಟ್ರ ನಾಯಕರಿಗೆ, ಪಕ್ಷದ ಅಭ್ಯರ್ಥಿಗಳಿಗೆ, ಮುಖಂಡರುಗಳಿಗೆ ಹಾಗೂ ಕಾರ್ಯಕರ್ತರಿಗೆ ವಾಡಿ ಬಿಜೆಪಿ ಶಕ್ತಿ ಕೇಂದ್ರದಿಂದ ಅಭಿನಂದನೆಗಳು, ಈ ಗೆಲವು ನಮ್ಮೆಲ್ಲರಿಗೆ ಹೆಚ್ಚು ಸಂತಸ ತಂದಿದೆ ಎಂದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್’ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಮುಖಂಡರಾದ ಸಿದ್ದಣ್ಣ ಕಲ್ಲಶೆಟ್ಟಿ, ಗಿರಿಮಲ್ಲಪ್ಪ ಕಟ್ಟಿಮನಿ, ಅರ್ಜುನ ಕಾಳೆಕರ್, ಹರಿ ಗಲಾಂಡೆ, ಅಯ್ಯಣ್ಣ ದಂಡೊತಿ, ಆನಂದ ಇಂಗಳಗಿ, ಪ್ರೇಮ ರಾಠೊಡ, ಮಹಾಲಿಂಗ ಶೆಳ್ಳಗಿ, ಯಂಕಮ್ಮ ಗೌಡಗಾಂವ, ಶರಣಮ್ಮ ಯಾದಗಿರಿ, ಆನಂದ ಶಿರವಾಳ, ದೇವೇಂದ್ರ ಬಡಿಗೇರ, ಹೀರಾ ನಾಯಕ, ದುರ್ಯೋಧನ ಜಾಧವ,ಚಂ ದ್ರಾಮ ಚವ್ಹಾಣ, ಆಕಾಶ ಚವ್ಹಾಣ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.