ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ದೇವಿಂದ್ರ ಯಾಬಾಳ ಅವರಿಗೆ‌ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಸನ್ಮಾನ

ಪಟ್ಟಣ

ಚಿತ್ತಾಪುರ: ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ದೇವಿಂದ್ರ ಯಾಬಾಳ ದಿಗ್ಗಾಂವ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಮತ್ತು
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್
ಖರ್ಗೆ ಅವರು ಸನ್ಮಾನಿಸಿ ಸಿಹಿ ಹಂಚುವ ಮೂಲಕ
ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ
ಸಾಲಿ, ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಸಂಜಯ ಬುಳಕರ್, ಮುಖಂಡರಾದ ಶರಣು ಡೋಣಗಾಂವ, ಸುನೀಲ್ ದೊಡ್ಡಮನಿ, ಮಲ್ಲಿಕಾರ್ಜುನ ಹೊನ್ನಪೂರ, ಶಿವಶರಣ ಮಂಗಾ, ಜಗದೀಶ್ ಚವ್ಹಾಣ, ಹಣಮಂತ ಸಂಕನೂರ, ವಿಜಯಕುಮಾರ್ ಯಾಗಾಪೂರ ಸೇರಿದಂತೆ
ಅನೇಕರು ಇದ್ದರು.

Leave a Reply

Your email address will not be published. Required fields are marked *