ಬಾಬಾ ಅಮ್ಟೆ ಶ್ರೇಷ್ಟ ಸಾಮಾಜಿಕ ಕಾರ್ಯಕರ್ತ

ಜಿಲ್ಲೆ

ಕಲಬುರಗಿ: ಮಹಾತ್ಮ ಗಾಂಧಿಜಿಯವರ ಅನುಯಾಯಿಯಾಗಿ ಅವರ ತತ್ವಗಳನ್ನು ಪ್ರಚುರ ಪಡಿಸಿದ್ದಾರೆ. ಅವರು ಶ್ರೇಷ್ಟ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.

ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಸ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ಬಾಬಾ ಅಮ್ಟೆಯವರ 17ನೇ ಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, ಬಾಬಾ ಅಮ್ಟೆ ಅವರು ಸಮಾಜದಲ್ಲಿರುವ ಕುಷ್ಟರೋಗಿಗಳ ಕಲ್ಯಾಣಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ. ಅವರಲ್ಲಿರುವ ಸಮಾಜಪರ ಕಾಳಜಿ ಮಾದರಿಯಾಗಿದೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಅಮರ ಜಿ.ಬಂಗರಗಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖ್ಯ ಶಿಕ್ಷಕಿ ಚಂಪಾಕಲಾ ನೆಲ್ಲುರೆ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *