ಚಿತ್ತಾಪುರ: ಮಹಿಳಾ ಜನಪದ ಲೋಕೋತ್ಸವ ಸಮಾರಂಭದಲ್ಲಿ ರಾಮತೀರ್ಥ ಗ್ರಾಮದ ಬುರ್ರ ಕಥೆ ಕಲಾವಿದೆ ಬಸ್ಸಮ್ಮ ಅವರಿಗೆ ಜನಪದ ಲೋಕತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ರಾಮನಗರದ ಜನಪದ ಲೋಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ಜನಪದ ಲೋಕೋತ್ಸವ ಸಮಾರಂಭದಲ್ಲಿ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬುರ್ರ ಕಥೆ ಕಲಾವಿದೆ ಬಸ್ಸಮ್ಮ ಅವರಿಗೆ ಜನಪದ ಲೋಕತ್ಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ನಿರ್ಮಲಾನಂದ ಸ್ವಾಮಿಗಳು ಪ್ರಶಸ್ತಿ ಪ್ರಧಾನ ಮಾಡಿದರು.
ಕಾರ್ಯಕ್ರಮದಲ್ಲಿ ರಾಮನಗರ ಆದಿಚುಂಚನಗಿರಿ ಮಠದ ಅನ್ನದಾನೇಶ್ವರ ಸ್ವಾಮೀಜಿ, ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯದ ಕುಲಪತಿ ಡಾ. ನಾಗೇಶ್ ಬೆಟ್ಟಕೋಟೆ, ದೆಹಲಿ ಕನ್ನಡ ಸಂಘದ ಅಧ್ಯಕ್ಷ ಸಿಎಂ ನಾಗರಾಜ್, ಚಾಮರಾಜ ನಗರದ ಬುಡಕಟ್ಟು ಕಲಾವಿದೆ ಡಾ. ರತ್ನಮ್, ಕರ್ನಾಟಕ ಜನಪದ ಪರಿಷತ್ ಅಧ್ಯಕ್ಷ ಹಿ.ಚಿ ಬೋರ ಲಿಂಗಯ್ಯ, ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್, ಕರ್ನಾಟಕ ಜಾನಪದ ಪರಿಷತ್ ಕಲಬುರಗಿ ಜಿಲ್ಲಾ ಅಧ್ಯಕ್ಷ ಸಿ.ಎಸ್ ಮಾಲಿಪಾಟೀಲ, ಚಿತ್ತಾಪುರ ತಾಲೂಕ ಅಧ್ಯಕ್ಷ ನಾಗಯ್ಯ ಸ್ವಾಮಿ ಅಲ್ಲೂರ್ ಸೇರಿದಂತೆ ಅನೇಕರು ಇದ್ದರು.