ಸುದ್ದಿ ಸಂಗ್ರಹ
ಚಿತ್ತಾಪುರ: ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ1981-82ನೇ ಸಾಲಿನ 10ನೇ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಫೆ. 22 ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಹಳೆಯ ವಿದ್ಯಾರ್ಥಿಗಳ ಮುಖ್ಯಸ್ಥ ರಾಜು ಕುಲಕರ್ಣಿ ಕರದಾಳ ತಿಳಿಸಿದ್ದಾರೆ.
ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಡಿವೈಎಸ್ಪಿ ಶಂಕರಗೌಡ ಪಾಟೀಲ ಉದ್ಘಾಟಿಸಲಿದ್ದಾರೆ, ಕಾಳಗಿ ತಾ.ಪಂ ಇಓ ಡಾ.ಬಸಲಿಂಗಪ್ಪ ಡಿಗ್ಗಿ, ಬಿ.ಆರ್.ಸಿ ಅಧಿಕಾರಿ ಮಲ್ಲಿಕಾರ್ಜುನ ಸೇಡಂ ಸೇರಿದಂತೆ ವಿವಿಧ ಅಧಿಕಾರಿಗಳು, ಗಣ್ಯರು ಆಗಮಿಸಲಿದ್ದಾರೆ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢ ಶಾಲೆಯ ಮುಖ್ಯಗುರು ಕಾಶಿರಾಯ ಕಲಾಲ್ ವಹಿಸಲಿದ್ದಾರೆ ಎಂದರು.
ಗುರುವಂದನಾ ಕಾರ್ಯಕ್ರಮದಲ್ಲಿ 1981-82ನೇ ಸಾಲಿನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಮೋನಪ್ಪ ಇನಾಮದಾರ, ಡಿ.ಮಹಾದೇವಪ್ಪ, ಹಣಮಂತಪ್ಪ ಯಾದವ್, ಮಧುಕರರಾವ್ ನಾಯಕ್, ಸಿ.ಎನ್ ಪಟ್ಟೆದಾರ, ಚಂದ್ರಮಪ್ಪ ಕಾಳಗಿ ಸೇರಿದಂತೆ ಅನೇಕ ಶಿಕ್ಷಕರಿಗೆ ಗೌರವ ಸನ್ಮಾನ ಮಾಡಿ ಸತ್ಕಾರಿ ಗುರುವಂದನೆ ಸಲ್ಲಿಸಲಾಗುವುದು ಎಂದರು.
ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದ್ದು, ಹಳೆಯ ವಿದ್ಯಾರ್ಥಿಗಳು ದೂರದಲ್ಲಿ ಇದ್ದರು ಎಲ್ಲರೂ ಬರಲು ಉತ್ಸುಕರಾಗಿದ್ದಾರೆ.
ಹಾಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದು, ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಕುಲಕರ್ಣಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮುಖ್ಯಗುರು ಕಾಶಿರಾಯ ಕಲಾಲ, ಹಳೆಯ ವಿದ್ಯಾರ್ಥಿಗಳಾದ ಪ್ರಕಾಶ ನವಗಿರಿ, ವಾಮನರಾವ ಹಡಪದ ಇದ್ದರು.