ಕಲಬುರಗಿ: ಧರ್ಮಗಳು ಬೇರೆ-ಬೇರೆಯಾದರು ಕೂಡಾ, ಎಲ್ಲಾ ಧರ್ಮಗಳ ಮೂಲತತ್ವ ಒಂದೆಯಾಗಿದೆ. ‘ದೇವನೊಬ್ಬ, ನಾಮ ಹಲವು’ ಆಗಿದ್ದು, ಎಲ್ಲಾ ಧರ್ಮಗಳ ತಿರುಳು ಒಂದೆಯಾಗಿದೆ. ಪ್ರತಿಯೊಬ್ಬರು ಪರಸ್ಪರ ಪ್ರೀತಿ, ಸೌಹಾರ್ದವಾಗಿ ಬದುಕಬೇಕೆಂಬ ಸಮನ್ವಯ ತತ್ವ ಪ್ರತಿಪಾದಿಸಿದ ರಾಮಕೃಷ್ಣ ಪರಮಹಂಸ್ರ ಸಂದೇಶ ಪಾಲನೆ ಅಗತ್ಯವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು.
ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಜರುಗಿದ ‘ರಾಮಕೃಷ್ಣ ಪರಮಹಂಸ್ರ 189ನೇ ಜನ್ಮದಿನೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರುರ, ಭಾರತದಲ್ಲಿ ಆಂಗ್ಲರ ಪ್ರಭಾವದಿಂದ ಎಲ್ಲೆಡೆ ಪಾಶ್ಚಾತ್ಯ ಸಂಸ್ಕೃತಿ ತುಂಬಿದ್ದ ಅಂದಿನ ದಿನಗಳಲ್ಲಿ ಪರಮಂಹಸರು ಭಾರತೀಯ ಸಂಸ್ಕೃತಿ, ಧರ್ಮ ಪರಂಪರೆಗಳ ಮಹತ್ವವನ್ನು ಎಲ್ಲೆಡೆ ಪ್ರಚಾರ ಮಾಡಿ ಜನಜಾಗೃತಿಯನ್ನುಂಟು ಮಾಡಿದರು. ಇದರಿಂದ ಸಮಾಜದ ಎಲ್ಲಾ ವರ್ಗದವರ ಮೇಲೆ ಇವರ ಪ್ರಭಾವ ಬೀರಿತು. ಇವರ ಪ್ರಭಾವಕ್ಕೆ ಒಳಗಾಗಿ ಅಸಂಖ್ಯಾತ ಶಿಷ್ಯಬಳಗವೇ ಸಿದ್ದವಾಯಿತು. ಅದರಲ್ಲಿ ಸ್ವಾಮಿ ವಿವೇಕಾನಂದರು ಪ್ರಮುಖರಾಗಿದ್ದಾರೆ. ಕಂದಾಚಾರ, ಮೂಢನಂಬಿಕೆಗಳನ್ನು ಹೋಗಲಾಡಿಸಲು ಪ್ರಯತ್ನಿಸಿದರು. ಅವರು ಯಾವಾಗಲೂ ‘ಆತ್ಮ ಸಾಕ್ಷಾತ್ಕಾರ’ದ ಬಗ್ಗೆ ಉಪದೇಶ ನೀಡುತ್ತಿದ್ದರು ಎಂದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಅಸ್ಲಾಂ ಶೇಖ್, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಸಿಬ್ಬಂದಿಗಳಾದ ಪ್ರಿಯಾಂಕಾ ಉಜಳಂಬಿ, ಐಶ್ವರ್ಯ ಬಿರಾದಾರ, ಪೂಜಾ ಜಮಾದಾರ, ನಿಲೊಫರ್ ಶೇಖ್ ಸೇರಿದಂತೆ ಅನೇಕರು ಇದ್ದರು.