ಅಳಿವಿನಂಚಿನ ವನ್ಯಜೀವಿಗಳ ಉಳಿಸುವ ಕಾರ್ಯವಾಗಲಿ: ಎಚ್.ಬಿ ಪಾಟೀಲ

ಜಿಲ್ಲೆ

ಕಲಬುರಗಿ: ಮಾನವ ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ನಾಶಮಾಡಿ ಅಲ್ಲಿನ ಅನೇಕ ವನ್ಯಜೀವಿಗಳನ್ನು ಬೇಟೆಯಾಡಿ ನಾಶಮಾಡುತ್ತಿದ್ದಾನೆ. ಇದರಿಂದ ಕೆಲವು ಸಂತತಿ ನಾಶಹೊಂದಿದ್ದು, ಮತ್ತೆ ಕೆಲವು ಅಳಿವುನಂಚಿನಲ್ಲಿವೆ. ಅರಣ್ಯ ಸಂಪತ್ತು, ಪ್ರಾಣಿ ಸಂಕುಲದ ರಕ್ಷಣೆ ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು.

ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ವನ್ಯಜೀವಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಪರಿಸರದ ಜೈವಿಕ ವ್ಯವಸ್ಥೆಯ ಸರಪಣಿಯಲ್ಲಿ ಒಂದು ಯಾವುದೆ ಜೀವಿಯ ಸಂತತಿ ನಾಶವಾದರೆ ಅದರ ನೇರ ಪರಿಣಾಮದ ಪರಿಸರದ ಮೇಲಾಗಿ, ಅಸಮತೋಲನೆಯಾಗುತ್ತದೆ. ಆದ್ದರಿಂದ ಸಸ್ಯ ಸಂಪತ್ತು, ಪ್ರಾಣಿ ಸಂಪತ್ತು, ವನ್ಯ ಜೀವಿಗಳ ಸಂರಕ್ಷಣೆ ಮಾಡುವುದರಿಂದ ಪರಿಸರ ಸಮತೋಲನ ಕಾಪಾಡಲು ಸಾಧ್ಯ ಎಂದರು.

ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ ಮಾತನಾಡಿ, ವನ್ಯಜೀವಿಗಳು ಜೀವ ವೈವಿಧ್ಯತೆಯನ್ನು ಕಾಪಾಡುತ್ತವೆ. ಜೀವಿಗಳ ನಾಶಗಳನ್ನು ತಡೆಗಟ್ಟುತ್ತವೆ. ಪ್ರವಾಸೋದ್ಯಮದ ಮೂಲಕ ಆರ್ಥಿಕ ಬೆಳವಣಿಗೆಯಾಗುತ್ತದೆ. ವನೀಕರಣಕ್ಕೆ ಉತ್ತೇಜನಕಾರಿಯಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಕರಾವಿಪ ಗ್ರಾಮೀಣ ಘಟಕದ ಮಾಜಿ ಸಂಚಾಲಕ ಶಿವಯೋಗೆಪ್ಪಾ ಎಸ್.ಬಿರಾದಾರ, ಮುಖ್ಯ ಶಿಕ್ಷಕಿ ಶಿವಯೋಗೆಪ್ಪಾ ಎಸ್.ಬಿರಾದಾರ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.‌

Leave a Reply

Your email address will not be published. Required fields are marked *