ವಾಡಿ: ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಪಟ್ಟಣ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು.

ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಾಂತಿ, ಸಹಬಾಳ್ವೆ ಮತ್ತು ಸಮಾನತೆಯ ಮಹತ್ವ ಸಾರಿ ಮಾನವ ಧರ್ಮಕ್ಕೆ ಜಯವಾಗಲಿ ಎಂದವರು ಶ್ರೀ ರೇಣುಕಾಚಾರ್ಯರು ಎಂದರು.

ಭೇಧ ಭಾವಗಳನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆ ಸಾರಿದ ಅವರು ತತ್ವಗಳನ್ನು ಪಾಲಿಸಿದರೆ ಶಾಂತಿ ನೆಲೆಸುತ್ತದೆ ಎಂದು ಸಮಾಜದಲ್ಲಿ ಮಾನವೀಯತೆಯ ಬೀಜ ಬಿತ್ತಿ ಮಾನವೀಯ ಸಮಾಜಕ್ಕೆ ನಾಂದಿ ಆಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಮುಖಂಡರಾದ ಶರಣಗೌಡ ಚಾಮನೂರ, ಶಿವಶಂಕರ ಕಾಶೆಟ್ಟಿ, ಅರ್ಜುನ ಕಾಳೆಕರ್,ಹರಿ ಗಲಾಂಡೆ, ಬಸವರಾಜ ಕಿರಣಗಿ, ಮಲ್ಲಿಕಾರ್ಜುನ ಸಾತಖೇಡ, ಆನಂದ ಇಂಗಳಗಿ, ದೇವೀಂದ್ರ ಬಡಿಗೇರ, ಚಂದ್ರಶೇಖರ ಬೆಣ್ಣೂರ, ಯಂಕಮ್ಮ ಗೌಡಗಾಂವ, ಶರಣಮ್ಮ ಯಾದಗಿರಿ, ಉಮಾ ಭಾಯಿ ಗೌಳಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *