ಆಸ್ಕರ್‌ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್ ಆಸ್ಪತ್ರೆಗೆ ದಾಖಲು

ರಾಷ್ಟೀಯ

ಚೆನ್ನೈ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ, ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಲಂಡನ್‌ನಿಂದ ಹಿಂದಿರುಗಿದ ನಂತರ ಅನಾರೋಗ್ಯ ಕಾಣಿಸಿಕೊಂಡಿದೆ, ಶನಿವಾರ ರಾತ್ರಿಯೇ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದರು. ನಿರ್ಜಲೀಕರಣದಿಂದ ಅಸ್ವಸ್ಥತೆ ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಂಜಾನ್‌ ಉಪವಾಸದಲ್ಲಿರುವುದರಿಂದ ಮತ್ತಷ್ಟು ಉಲ್ಬಣಗೊಂಡಿದೆ ಎಂದು ರೆಹಮಾನ್ ವಕ್ತಾರರೊಬ್ಬರು ತಿಳಿಸಿರುವದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರೆಹಮಾನ್ ಅವರ ಆಪ್ತ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *