ಕಾರ್ಮಿಕರಿಗೆ ಸೇವಾ ಭದ್ರತೆ, ಸೂಕ್ತ ವೇತನ ದೊರೆಯಲಿ

ಜಿಲ್ಲೆ

ಕಲಬುರಗಿ: ಬೆವರು ಹರಿಸಿ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾಯಕ ಜೀವಿಗಳ ಕೊಡುಗೆ ಸಮಾಜ ಮರೆಯುವಂತಿಲ್ಲ. ಅವರಿಗೆ ಸೇವಾ ಭದ್ರತೆ, ಸೂಕ್ತ ವೇತನ ನೀಡಬೇಕು ಎಂದು ಕಾರ್ಮಿಕ ಮುಖಂಡ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು.

ನಗರದ ಜಗತ್ ವೃತ್ತದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪುತ್ತಳಿಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಕಾರ್ಮಿಕರ ದಿನಾಚರಣೆ’ಯಲ್ಲಿ ಕಾರ್ಮಿಕರಿಗೆ ಸತ್ಕರಿಸಿ, ಮಾತನಾಡಿದರು.

ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ್ ಮಾತನಾಡಿ, ‘ನಮಿಸುವ ಕೈಗಳಿಗಿಂತ, ದುಡಿಯುವ ಕೈಗಳು ಶ್ರೇಷ್ಟ’ವಾಗಿವೆ. ದುಡಿಯುವ ವರ್ಗ ಕನಿಷ್ಟ ಮತ್ತು ದುಡಿಸಿಕೊಳ್ಳುವ ವರ್ಗ ಗರಿಷ್ಟ ಎಂಬ ಮನೋಭಾವನೆ ತೆಗೆದು ಕಾಯಕಕ್ಕೆ ದೈವತ್ವದ ಸ್ಥಾನವನ್ನು ನೀಡಿದ ಬಸವಾದಿ ಶರಣರ ಕೊಡುಗೆ ಅನನ್ಯವಾಗಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಕಾರ್ಮಿಕರ ಹಿತರಕ್ಷಣೆಗಾಗಿ ಸಂವಿಧಾನದ ಮೂಲಕ ಕಾನೂನುಗಳನ್ನು ನೀಡಿದ್ದಾರೆ ಎಂದರು.

ಕಾರ್ಮಿಕರಾದ ಕಾಟೆಪ್ಪ ಯಾಧವ, ರಾಜು ಯಡ್ರಾಮಿ, ಕನಕದಾಸ ಪೂಜಾರಿ, ಶಿಲ್ಪಾ ಕಾಂಬಳೆ, ಶಿವಲಿಂಗಮ್ಮ, ಇಂದುಬಾಯಿ ಅವರಿಗೆ ಸತ್ಕರಿಸಲಾಯಿತು.

ಮಲ್ಲಿಕಾರ್ಜುನ ಯಾತನೂರ, ಕಪಿಲ ಜಾನೆ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *