ಕಲಬುರಗಿ: ಸಮಾಜದಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳಿಗೆ ಪರಿಹಾರ, ನೈಸರ್ಗಿಕ ವಿಪತ್ತುಗಳ ನಿರ್ವಹಣೆ, ಜನಜಾಗೃತಿ ಕಾರ್ಯಕ್ರಮ, ತೊಂದರೆಯಲ್ಲಿರುವ ಜನರಿಗೆ ಸಹಾಯ ಸೇರಿದಂತೆ ಅನೇಕ ಜನಪರ ಕಾರ್ಯಗಳನ್ನು ನಿರಂತರವಾಗಿ ಮಾಡುವ ಮೂಲಕ ರೆಟ್’ಕ್ರಾಸ್ ಸಂಸ್ಥೆ ರಾಷ್ಟ್ರದ ಅಭಿವೃದ್ಧಿಗೆ ತನ್ನದೆಯಾದ ಅನನ್ಯ ಕೊಡುಗೆ ನೀಡುತ್ತಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳೀದರು.
ನಗರದ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ, ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಏರ್ಪಡಿಸಿದ್ದ ‘ವಿಶ್ವ ರೆಡ್ಕ್ರಾಸ್ ಸಂಸ್ಥೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಈ ಸಂಸ್ಥೆಯು ಶಾಂತಿ ಕಾಪಾಡುವುದ, ಗಾಯಗೊಂಡ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ, ಆಕಸ್ಮಿಕ ಮರಣದ ಪ್ರಮಾಣ ತಗ್ಗಿಸುವುದು, ಸಮುದಾಯದ ಅಭಿವೃದ್ಧಿಯಲ್ಲಿ ತೊಡಗುವ ಮೂಲಕ ಸಬಲೀಕರಣ ಮಾಡುವ ಕಾರ್ಯಗಳನ್ನು ಮಾಡುತ್ತಿದೆ. ಹೆನ್ರಿ ಡ್ಯೂಯೆಟ್ ಅವರ ದೂರದೃಷ್ಠಿಯ ಫಲವೆ ಈ ಸಂಸ್ಥೆಯ ಉಗಮಕ್ಕೆ ಕಾರಣವಾಗಿದೆ ಎಂದರು.
ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ ಮತ್ತು ಸಂಸ್ಥೆಯ ಮುಖ್ಯಸ್ಥ ಬಸವರಾಜ ಮಳ್ಳಿ ಮಾತನಾಡಿ, ರೆಡೆಕ್ರಾಸ್ ಸಂಸ್ಥೆಯು ಯುದ್ಧಪೀಡಿತ ಸಂದರ್ಭದಲ್ಲಿ ಕಂಡುಬರುವ ಜೀವಹಾನಿ ತಪ್ಪಿಸಲು ಪ್ರಯತ್ನಿಸುತ್ತದೆ. ಇದರ ಕೊಡುಗೆ ಮರೆಯುವಂತಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಬಳಗದ ಸದಸ್ಯರಾದ ಮಹಾಂತೇಶ ಬಿರಾದಾರ, ರಾಜಕುಮಾರ ಬಟಗೇರಿ, ಬಸವರಾಜ ದೇಸಾಯಿ, ಸಹ ಶಿಕ್ಷಕರಾದ ಇಂದಿರಾ ಕಿರಣಗಿ, ಭೀಮಾಶಂಕರ ಶೇರಿ,ಮಲ್ಲಿಕಾರ್ಜುನ ಗುಡಬಾ ಸೇರಿದಂತೆ ಸಂಸ್ಥೆಯ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.