ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ

ಜಿಲ್ಲೆ

ಕಲಬುರಗಿ: ಗಿರೀಶ್ ಕಾರ್ನಾಡ ಅವರು ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಹೀಗೆ ವಿವಿಧ ಮುಖಗಳುಳ್ಳ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟಿರುವ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು.

ನಗರದ ಹೊರವಲಯ ಉಪಳಾಂವನ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ ‘ಡಾ.ಗಿರೀಶ್ ಕಾರ್ನಾಡ್‌ರ 87ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕಾರ್ನಾಡ್‌ರು ‘ಯಯಾತಿ’, ‘ತಲೆದಂಡ’, ‘ಹಯವದನ’, ‘ಅಂಜುಮಲ್ಲಿಗೆ’, ‘ನಾಗಮಂಡಲ’ ಸೇರಿದಂತೆ ಮುಂತಾದ ನಾಟಕಗಳನ್ನು ರಚಿಸಿದ್ದಾರೆ. ರಾಜ್ಯೋತ್ಸವ, ಪದ್ಮಶ್ರೀ, ಪದ್ಮಭೂಷಣ, ಜ್ಞಾನಪೀಠ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗುವ ಮೂಲಕ ನಾಡಿನ ಕೀರ್ತಿ ಹೆಚ್ಚಿಸಿದ್ದಾರೆ. ಅನೇಕ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಪ್ರತಿಭಾವಂತ, ಪ್ರಗತಿಪರ ಲೇಖಕರಾಗಿ ನಾಡಿಗೆ ತಮ್ಮದೇ ಆದ ಸೇವೆಯನ್ನು ಸಲ್ಲಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಗೌಡೇಶ ಬಿರಾದಾರ, ಕಾರ್ಯದರ್ಶಿ ಓಂದೇವಿ ಜಿ.ಬಿರಾದಾರ, ಶಿಕ್ಷಕಿಯರಾದ ಜ್ಯೋತಿ ಪಾಟೀಲ, ಸಂಗೀತಾ ಪಿ.ಪಾಟೀಲ, ಮೀನಾಕ್ಷಿ ಜಮಾದಾರ, ಶಿವಲೀಲಾ ಪೂಜಾರಿ, ನಿತ್ಯಾನಂದ ಪೂಜಾರಿ ಸೇರಿದಂತೆ ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *