ನಾಡಿಗೆ ಕೆಂಪೇಗೌಡರ ಕೊಡುಗೆ ಅನನ್ಯ

ತಾಲೂಕು

ಕಲಬುರಗಿ: ದೇಶದ ಹೆಮ್ಮೆಯ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರು ನೂರಾರು ವರ್ಷಗಳ ಹಿಂದೆ ಉತ್ತಮ ರಸ್ತೆಗಳ ನಿರ್ಮಾಣ, ಅನೇಕ ಕೆರೆ-ಬಾವಿಗಳ ನಿರ್ಮಿಸುವುದು ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡುವ ಮೂಲಕ ನಾಡಿಗೆ ತಮ್ಮದೆಯಾದ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು.

ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, ಇಂದು ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗುತ್ತದೆ ಎಂದರೆ ಅದಕ್ಕೆ ನೂರಾರು ವರ್ಷಗಳ ಹಿಂದೆ ಕೆಂಪೇಗೌಡರು ಅದರ ಅಭಿವೃದ್ಧಿಗೆ ನೀಡಿದ ಶ್ರಮ ಆಧಾರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಅಸ್ಮಾ ಜಬೀನ್, ಸುವರ್ಣಲತಾ ಭಂಡಾರಿ, ನಯಿಮಾ ನಾಹಿದ್, ಮಲ್ಲಿಕಾರ್ಜುನ ದೊಡ್ಡಮನಿ, ಎಚ್.ಬಿ ಪಾಟೀಲ, ಮ¯್ಲಪ್ಪ ರಂಜಣಗಿ, ರೇಣುಕಾ ಚಿಕ್ಕಮೇಟಿ, ದುಂಡಪ್ಪ ಯರಗೋಳ, ನಾರಾಯಣಸ್ವಾಮಿ, ಅಲೀಯಾ ತಬಸ್ಸುಮ್, ಪ್ರ.ದ.ಸ ಪ್ರೇಮಾ ಸುರಪುರ, ದ್ವಿದಸ ರಾಮಚಂದ್ರ ಚವ್ಹಾಣ ಹಾಗೂ ವಿದ್ಯಾರ್ಥಿಗಳು ಇದರು.

Leave a Reply

Your email address will not be published. Required fields are marked *