ಕರವೇ ತಾಲೂಕು ಗೌರವ ಅಧ್ಯಕ್ಷರಾಗಿ ಮಸ್ತಾನ್ ಸಾಬ್ ಕೊರವಿ ಆಯ್ಕೆ

ನಗರದ

ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾಳಗಿ ತಾಲೂಕು ಘಟಕದ ಗೌರವ ಅಧ್ಯಕ್ಷರಾಗಿ ಮಸ್ತಾನ್ ಸಾಬ್ ತಂದೆ ಇಬ್ರಾಹಿಂ ಸಾಬ್ ಕೊರವಿ ಅವರನ್ನು ನೇಮಕ ಮಾಡಲಾಯಿತು.

ನಗರದ ಒಕ್ಸ್ ಎಲೈಟ್ ಹೋಟೆಲ್’ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಮಾಸಿಕ ಸಭೆಯಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಕಾಶಿ ಮತ್ತು ಕರವೇ ಜಿಲ್ಲಾಧ್ಯಕ್ಷ ಆನಂದ ದೊಡ್ಡಮನಿ ಅವರು ಕಾಳಗಿ ತಾಲೂಕು ಘಟಕದ ಗೌರವ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಸರ್ವ ತಾಲೂಕು ಅಧ್ಯಕ್ಷರು, ಗ್ರಾಮ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *