ಭಾರಿ ಮಳೆ: 3 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ಮಳೆ ರಾಜ್ಯ

ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್’ ಮತ್ತು ಬಹುತೇಕ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ನೀಡಿದ್ದು, ಭಾರಿ ಮಳೆಯಾಗಲಿದೆ.

ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ದಾವಣಗೆರೆ, ಕೋಲಾರ ಮತ್ತು ಮೈಸೂರು ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *