Site icon ಸುದ್ದಿ ಸಂಗ್ರಹ

ಬಿಗ್ ಬಾಸ್ ವಿನ್ನರ್ ಹಣಮಂತ ಲಮಾಣಿ ಮತ್ತು ತಂಡ ನಾಳೆ ಚಿತ್ತಾಪುರಕ್ಕೆ ಆಗಮನ

ಚಿತ್ತಾಪುರ: ಪಟ್ಟಣದ ಸ್ಟೇಷನ್‌ ತಾಂಡಾದಲ್ಲಿ 25ನೇ ವರ್ಷದ ನವರಾತ್ರಿ ಉತ್ಸವದ ಬೆಳ್ಳಿ ಮಹೋತ್ಸವ ನಿಮಿತ್ಯ ನಾಳೆ ಸಂಜೆ ಬಿಗ್ ಬಾಸ್ ವಿನ್ನರ್ ಹಣಮಂತ ಲಮಾಣಿ ಮತ್ತು ತಂಡ ಆಗಮಿಸುತ್ತಿದ್ದಾರೆ ಎಂದು ನವರಾತ್ರಿ ಉತ್ಸವ ಸಮಿತಿಯ ಅಧ್ಯಕ್ಷ ವಿನೋದ ಪವಾರ ಹೇಳಿದ್ದಾರೆ.

ಸ್ಟೇಷನ್ ತಾಂಡಾದ ಸೇವಾಲಾಲ್, ಜಗದಂಬಾ ದೇವಸ್ಥಾನದ ಆವರಣದಲ್ಲಿ ನಾಳೆ ಸಂಜೆ 7.30ಕ್ಕೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿಜೇತ ಹಣಮಂತ ಲಮಾಣಿ ಮತ್ತು ತಂಡದಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗುವುದು, ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

Exit mobile version