ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಚಿತ್ತಾಪುರ ತಾಲೂಕಿನ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಜನ್ಮದಿನದ ಪ್ರಯುಕ್ತ ಅ.1 ರಂದು ಅನಾಥ, ನಿರ್ಗತಿಕ, ಬುದ್ಧಿಮಾಂದ್ಯರಿಗೆ ಉಚಿತ ಕ್ಷೌರ ಸೇವೆ ಮಾಡಲಾಗುವುದು ಎಂದು ಹಡಪದ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ (ಎನ್) ಹೇಳಿದರು.

ಕಲಬುರಗಿ ನಗರದ ಬಿದ್ದಾಪೂರ ಕಾಲೋನಿಯ ಅನಾಥ, ನಿರ್ಗತಿಕ ಮತ್ತು ಬುದ್ಧಿಮಾಂದ್ಯರ ಕೇಂದ್ರಕ್ಕೆ ಭೇಟಿ ನೀಡಿ ಉಚಿತ ಕ್ಷೌರ ಸೇವೆ ಮಾಡಲಾಗುವುದು, ಕಳೆದ 6 ವರ್ಷಗಳಿಂದ ಉಚಿತ ಕ್ಷೌರ ಸೇವೆ ಸಲ್ಲಿಸಲಾಗುತ್ತಿದೆ, ಇದುವರೆಗೆ ಒಟ್ಟು 1,465 ಕ್ಕೂ ಹೆಚ್ಚು ನಿರ್ಗತಿಕರಿಗೆ ಕ್ಷೌರ ಸೇವೆ ಮಾಡಲಾಗಿದೆ. ಈ ವರ್ಷ 15 ಕಡೆ ನೂರಾರು ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಮಾಡಲಾಗುವುದು ಎಂದರು.