ಕಲಬುರಗಿ: ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ‘ಅಮ್ಮ ಪ್ರಶಸ್ತಿ’ ಪ್ರಖ್ಯಾತಿ ಪಡೆದಿದ್ದು, ಇದೀಗ 25ನೇ ವರ್ಷದ ಸಂಭ್ರಮದಲ್ಲಿದೆ. ಪತ್ರಕರ್ತ ಹಾಗೂ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ತಾಯಿಯ ಸ್ಮರಣಾರ್ಥವಾಗಿ ಜಿಲ್ಲೆಯ ಸೇಡಂ ಪಟ್ಟಣದ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 25ನೇ ವರ್ಷದ ‘ಅಮ್ಮ ಪ್ರಶಸ್ತಿ’ಗಾಗಿ 2024 ಮತ್ತು 2025 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ 24 ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಅಮ್ಮ ಪ್ರಶಸ್ತಿಗೆ 25ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೆ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದು.
ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ, ಸನ್ಮಾನ, ಗೌರವ ಕಾಣಿಕೆ ನೀಡಿ ಸತ್ಕರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ: ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ “ಅಮ್ಮ ನಿಲಯ” ರಾಮಚಂದ್ರ ಲೇಔಟ್, ಪಿಡಬ್ಲ್ಯೂಡಿ ಕಚೇರಿ ಹತ್ತಿರ ಸೇಡಂ -585 222. ಕಲಬುರಗಿ ಜಿಲ್ಲೆ.
ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ 9731666052 ಸಂಪರ್ಕಿಸಬಹುದು.