ವಾಡಿ: ಮೂಲಭೂತ ಸೌಕರ್ಯ ಒದಗಿಸಲು ಬಿಜೆಪಿ ಆಗ್ರಹ

ಪಟ್ಟಣದ

ಸುದ್ದಿ ಸಂಗ್ರಹ ವಾಡಿ
ಪಟ್ಟಣದ ಜನರ ಸಂಕಷ್ಟಕ್ಕೆ ಸ್ಪಂದಿಸಿ ಮೂಲಭೂತ ಸೌಕರ್ಯ ಒದಗಿಸಿ ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಅವರಿಗೆ ಬಿಜೆಪಿ ಮುಖಂಡರು ಮನವಿ ಪತ್ರ ಸಲ್ಲಿಸಿ, ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪಟ್ಟಣದ ಅಭಿವೃದ್ಧಿ ಬಗ್ಗೆ ಚರ್ಚಿಸಿ ವಾರ್ಡ್‌ ಸಂಖ್ಯೆ1 ಬಸವನ‌ ಖಣಿಯಲ್ಲಿ ವಾಸಿಸುವರಿಗೆ ಇನ್ನೂ ಹಕ್ಕು ಪತ್ರ ಇಲ್ಲ, ಸುಮಾರು 20 ವರ್ಷಗಳಿಂದ ಪುರಸಭೆ ಇದ್ದರೂ ಜನಸಾಮಾನ್ಯರಿಗೆ ಮೂಲಭೂತ ಸೌಕರ್ಯಗಳಿಲ್ಲದೆ ಇರುವುದು ದುರಾದೃಷ್ಟಕರವಾಗಿದೆ ಎಂದರು.

ಬಹುತೇಕ ಕಡೆ ಸ್ಥಳೀಯರಿಗೆ ವಾಸಿಸುವ ಹಕ್ಕು ಪತ್ರ ಕೊಟ್ಟಿಲ್ಲ, ಅಲ್ಲಿನ ನಿವಾಸಿಗಳು ತೆರಿಗೆ ಕೊಡಲು ಸಿದ್ದರಿದ್ದರೂ ಅಧಿಕಾರಿಗಳ ಮುಂದೆ ಬರುತ್ತಿಲ್ಲಾ, ಆದಷ್ಟು ಬೇಗ ಇದನ್ನು ಸರಿಪಡಿಸಿ ಎಂದರು.

ಪಟ್ಟಣವು ಸುಮಾರು 50 ಸಾವಿರ ಜನಸಂಖ್ಯೆ ಹೊಂದಿದೆ,
ಇಲ್ಲಿ ಪ್ರಖ್ಯಾತ ಎಸಿಸಿ(ಆದಾನಿ) ಸಿಮೆಂಟ್ ಕಾರ್ಖಾನೆ ಹಾಗೂ ಬೃಹತ್ ರೈಲ್ವೆ ನಿಲ್ದಾಣ‌ ಇದ್ದರು ಕೂಡ ಜನರು ಸಾಮಾನ್ಯ ಜೀವನ ನಡೆಸಲು ಹರಸಾಹಸ ಪಡುತ್ತಿದ್ದಾರೆ ಎಂದರು.

3-4 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ, ಅದು ರಾಡಿ ನೀರು ಸರಬರಾಜಾದರೆ ಪೈಪ್ ಗಳ ಸೋರಿಕೆಯಿಂದ ಚರಂಡಿ ನೀರು ರಸ್ತೆ ಮೇಲೆ ಹಾಗೂ ಮನೆಯೊಳಗೆ ಬರತ್ತದೆ ಮತ್ತು ಬೀದಿ ದೀಪಗಳ ಕೊರತೆ ಇದೆ, ಹಂದಿ, ನಾಯಿಗಳ ಕಾಟ ಮತ್ತು ಬಸ್ ನಿಲ್ದಾಣ ಇಲ್ಲದೆ ಇರುವುದು ಸೇರಿದಂತೆ ಮುಂತಾದ ಸಮಸ್ಯೆಗಳ ಆಗರವಾದ ಪಟ್ಟಣವಾಗಿದೆ ಎಂದರು.

ಇದನ್ನೆಲ್ಲಾ ಸರಿದೂಗಿಸಲು ಇರುವ ಪುರಸಭೆಯಲ್ಲಿ ಕೆಲ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿರುವುದರಿಂದ ಸಾರ್ವಜನಿಕರು ಮೂಲಭೂತ ಸವಲತ್ತುಗಳಿಲ್ಲದೆ ಬದುಕುವ ದುಸ್ಥಿತಿ ನಿರ್ಮಾಣವಾಗಿದೆ ಎಂದರು.

ಶುದ್ಧ ನೀರು ಪೂರೈಕೆ ಜೊತೆಗೆ ಪ್ರತಿ ದಿನ ನೀರು ಸರಬರಾಜು ಮಾಡಿ, ವಾರ್ಡ ನಂ.1 ಸೇರಿದಂತೆ ಬಹುತೇಕ ವಾರ್ಡಗಳಲ್ಲಿ ನೀರಿಗಾಗಿ ಜನರು ಪರಿತಪಿಸುತ್ತಿದ್ದಾರೆ.
ಪಟ್ಟಣದಲ್ಲಿ ಮಿತಿಮೀರಿದ ಪರಿಸರ ಮಾಲಿನ್ಯಕ್ಕೆ ಕಡಿವಾಣ ಹಾಕಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಕೈಗೊಳ್ಳಿ. ಕೋಟ್ಯಾಂತರ ರೂ ವೆಚ್ಚದ ತ್ಯಾಜ್ಯ ಸಂಸ್ಕರಣಾ ಘಟಕದ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದೆ, ಅದರ ಸದುಪಯೋಗಪಡಿಸಿಕೊಳ್ಳಬೇಕು, ಎಲ್ಲಾ ವಾರ್ಡ್’ಗಳಲ್ಲಿ ಸಸಿ ನೆಟ್ಟು ಪೋಷಿಸಿ. ಪಟ್ಟಣದ ಜನನಿಬಿಡ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯ ಮತ್ತು ಬಸ್ ನಿಲ್ದಾಣ ನಿರ್ಮಾಣಕ್ಕೆ ತಕ್ಷಣ ಮುಂದಾಗಿ. ತರಕಾರಿ ಮತ್ತು ಮಾಂಸಕ್ಕೆ ಪ್ರತ್ಯೇಕ ಮಾರುಕಟ್ಟೆ ಒದಗಿಸಿ, ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಕ್ರಮಕೈಗೊಳ್ಳಿ. ಪುರಸಭೆಯಲ್ಲಿ ಮತ್ತು ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಎಂದರು.

ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ 5 ಕೋಟಿ ರೂ ವೆಚ್ಚದ ಮುಖ್ಯ ರಸ್ತೆ ಸಂಪೂರ್ಣ ಕಳಪೆ ಮಟ್ಟದಾಗಿದ್ದು, ಇದರ ಬಗ್ಗೆ ತನಿಖೆಗೆ ಮೆಲಾಧಿಕಾರಿಗಳಿಗೆ ಪತ್ರ ಬರೆದು, ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಿ, ಪಟ್ಟಣದಲ್ಲಿ ನಡೆದಿದ್ದ ಅಭಿವೃದ್ಧಿ ಕಾಮರಿಗಳು ಸಂಪೂರ್ಣ ಕಳಪೆ ಮಟ್ಟದಾಗಿವೆ ಇದರ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ಕೊಟ್ಟರು ನಿಂತಿಲ್ಲ, ಸಾರ್ವಜನಿಕ ಸಂಪತ್ತಿನ ದುರುಪಯೋಗ ಆಗುತ್ತಿದೆ ಇದನ್ನು ತಡೆಗಟ್ಟಿ ಎಂದರು.

ವಿಕಲಚೇತನರಿಗೆ ತ್ರಿಚಕ್ರ ವಾಹನ, ಬಡ ಮಹಿಳೆಯರಿಗೆ ಹೊಲಿಗೆ ಯಂತ್ರ ಇನ್ನೂ ವಿತರಣೆಯಾಗದೆ ತಾಜ್ಯ ವಿಲೇವಾರಿ ಘಟಕದಲ್ಲಿ ಹಾಳಾಗುತ್ತಿವೆ ಅರ್ಹರಿಗೆ ವಿತರಿಸಿ, ಕಸದ ಬುಟ್ಟಿ ಖರೀದಿಯಲ್ಲಿ ಹಾಗೂ ಡಿಸೇಲ್ ಬಳಕೆಯಲ್ಲಿ ಭ್ರಷ್ಟಾಚಾರವಾಗಿರು ಮಾಹಿತಿ ಬಂದಿದ್ದು ಇದರ ವಿರುದ್ಧ ತಕ್ಷಣ ಕ್ರಮಕ್ಕೆ ಮುಂದಾಗಿ ಎಂದರು.

ಮಧ್ಯಾಹ್ನ ಬರುವುದು, ಮಧ್ಯಾಹ್ನ ಹೋಗುವುದು ಪುರಸಭೆ ಕಛೇರಿಯಲ್ಲಿ ಕಾರ್ಯನಿರ್ವಹಿಸುವ ಕೆಲವರ ಕಾಯಕವಾಗಿದೆ. ಈ ಸ್ಥಳಗಳಲ್ಲಿ ಬಯೋ ಮೆಟ್ರಿಕ್ ಅಳವಡಿಸಿ ಎಂದರು.

ಪುರಸಭೆ ಪೌರ ಕಾರ್ಮಿಕರ ನೇಮಕಾತಿಯಲ್ಲಿ, ಹಾಜರಾತಿಯಲ್ಲಿ ಅವ್ಯವಹಾರ ನಡೆಯತ್ತಿರುವುದನ್ನು ತಡೆಗಟ್ಟಿ. ಪಟ್ಟಣದ ಸಾರ್ವಜನಿಕ ಉದ್ಯಾನಗಳು ಸ್ವಚ್ಛ ಗೊಳಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಿ.
ಕೃಷಿ ಉತ್ಪನ್ನ ಮಾರುಕಟ್ಟೆಗೆ 4 ಎಕರೆ ಜಮೀನು ಖರೀದಿ ಮಾಡಿ ಸುಮಾರು 15 ವರ್ಷಗಳಾಯಿತು, ಇನ್ನೂ ಕೂಡಾ ಮಾರುಕಟ್ಟೆ ಸ್ಥಾಪನೆಯಾಗಿಲ್ಲ, ದೂಡ್ಡ ನಾಮಫಲಕ ಮಾತ್ರ ಹಾಕಿದ್ದಾರೆ, ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಾಪನೆ ಮಾಡಿದರೆ ಸುತ್ತಲಿನ ಹತ್ತಾರು ಹಳ್ಳಿಯ ರೈತರಿಗೆ ಅನುಕೂಲವಾಗುತ್ತದೆ ಇದರ ಬಗ್ಗೆ ತಾವು ಮಾಹಿತಿ ನೀಡಿ ಆದಷ್ಟೂ ಬೇಗ ಪ್ರಾರಂಭಿಸಿ ಮತ್ತು ವಿವಿಧ ಸಾರ್ವಜನಿಕ ತೊಂದರೆಗಳನ್ನು ಪರಿಹರಿಸಿ ಎಂದು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಮಾಜಿ ಪುರಸಭೆ ಸದಸ್ಯರಾದ ಕಿಶನ ಜಾಧವ, ಅಂಬದಾಸ ಜಾಧವ, ಯುವ ಮುಖಂಡ ಹೀರಾ ನಾಯಕ ಇದ್ದರು.

Leave a Reply

Your email address will not be published. Required fields are marked *