ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ

ಜಿಲ್ಲೆ

ಸುದ್ದಿ ಸಂಗ್ರಹ ಉಡುಪಿ
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಮತ್ತು ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಟ ಮತ್ತು ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಕುಟುಂಬ ಮತ್ತು ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್‌ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು.

ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ ವತಿಯಿಂದ ಶ್ರೀ ಸುಗುಣೇಂದ್ರ ತೀರ್ಥರು ವಿಶೇಷ ಗೌರವ ಸಲ್ಲಿಸಿದರು.

Leave a Reply

Your email address will not be published. Required fields are marked *