ಬೆಂಗಳೂರು: ಸುದೀಪ್ ಬಿಗ್ ಬಾಸ್’ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಸುದೀಪ್ ಅವರು ಪ್ರತಿ ಸೀಸನ್ನಲ್ಲಿ ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ.
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯದಲ್ಲೇ ಶಾಕಿಂಗ್ ಅಪ್ಡೇಟ್ ಕೊಟ್ಟಿದ್ದಾರೆ. ಈ ಸೀಸನ್ ಬಳಿಕ ಶೋ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ಕೂಡ ನೀಡಿದ್ದಾರೆ. ಅವರ ಈ ನಿರ್ಧಾರದಿಂದ ಅಭಿಮಾನಿಗಳಿಗೆ ಬೇಸರ ಮೂಡಿದೆ.
ಸುದೀಪ್ ಬಿಗ್ ಬಾಸ್ನ ಅತಿಯಾಗಿ ಪ್ರೀತಿಸುತ್ತಾರೆ. ಸ್ಪರ್ಧಿಗಳನ್ನು ತಮ್ಮ ಮನೆಯವರಂತೆ ಕಾಣುತ್ತಾರೆ. ಈ ಕಾರಣಕ್ಕೆ ಪ್ರತಿ ಸೀಸನ್ನಲ್ಲಿ ಸ್ಪರ್ಧಿಗಳಿಗೆ ತಾವೇ ಅಡುಗೆ ಮಾಡಿ ಮನೆಯಿಂದ ಊಟ ಕಳುಹಿಸುತ್ತಾರೆ. ಇದು ಅವರಿಗೆ ಬಿಗ್ ಬಾಸ್ ಮೇಲಿರುವ ಪ್ರೀತಿಯನ್ನು ತೋರಿಸುತ್ತದೆ.
ಈ ಮೊದಲು ಐದು ಸೀಸನ್ಗಳಿಗೆ ಸುದೀಪ್ ಒಪ್ಪಂದ ಮಾಡಿಕೊಂಡಿದ್ದರು. ಐದು ಸೀಸನ್ಗಳಿಂದ ಅವರು ಪಡೆದುಕೊಂಡಿದ್ದು 20 ಕೋಟಿ ರೂ ಎನ್ನಲಾಗಿದೆ. ಅಂದರೆ, ಪ್ರತಿ ಸೀಸನ್ಗೆ ಅವರು ನಾಲ್ಕು ಕೋಟಿ ರೂ.ಗಳು ಪಡೆದಿದ್ದಾರೆ ಎನ್ನಲಾಗಿದೆ.
ಬಿಗ್ ಬಾಸ್ ಕನ್ನಡ ಸೀಸನ್ 11ಕ್ಕೆ ಸುದೀಪ್ 8 ಕೋಟಿ ರೂ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಸುದೀಪ್ ಕಡೆಯಿಂದಾಗಲಿ, ಕಲರ್ಸ್ ವಾಹಿನಿ ಕಡೆಯಿಂದ ಯಾವುದೆ ಅಧಿಕೃತ ಘೋಷಣೆಯಾಗಿಲ್ಲ.
ಸುದೀಪ್ ಅವರ ಖಡಕ್ ನಿರೂಪಣೆ ಇಷ್ಟವಾಗುತ್ತದೆ. ಅವರಿಂದಲೇ ಶೋ ಟಿಆರ್ಪಿ ಕೂಡ ಹೆಚ್ಚಿದೆ. ಈಗ ಅವರು ಇಲ್ಲ ಎಂದರೆ, ಶೋ ವರ್ಚಸ್ಸು ಕಡಿಮೆಯಾಗುವ ಭಯ ಶುರುವಾಗಿದೆ.