ಇನ್ಮುಂದೆ ಬುಕ್‌ ಮಾಡಿದ ದಿನವೆ ಗೃಹ ಬಳಕೆ ಸಿಲಿಂಡರ್ ವಿತರಣೆ: ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಮಧ್ಯಪ್ರಾಚ್ಯದಲ್ಲಿ ಕದನ ವಿರಾಮದ್ದೆ ಒಂದು ಕಥೆಯಾದರೆ, ರಾಜ್ಯದಲ್ಲಿ ಗ್ಯಾಸ್ ಅಭಾವದ್ದೆ ಇನ್ನೊಂದು ಕಥೆಯಾಗಿದೆ. ಈ ಮಧ್ಯೆ ಗೃಹ ಬಳಕೆ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಮುಂದಾಗಿರುವ ಸರ್ಕಾರ, 26 ದಿನಗಳ ಬಳಿಕ ಸಿಲಿಂಡರ್ ಬುಕ್ ಮಾಡಿದ್ದರೆ ತಕ್ಷಣ ವಿತರಿಸುವಂತೆ ಗ್ಯಾಸ್ ಏಜೆನ್ಸಿಗಳಿಗೆ ಸೂಚಿಸಿದೆ.

ಯಾವುದೆ ಕಾರಣಕ್ಕೂ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡಿಕೊಳ್ಳಬೇಕೆಂದು ತಿಳಿಸಿದೆ. ಇನ್ನೂ, ಕಮರ್ಷಿಯಲ್ ಸಿಲಿಂಡರ್ ವಿಚಾರದಲ್ಲಿ ಸುಧಾರಣೆ ಆಗಿದ್ದು, ಆಟೋ ಗ್ಯಾಸ್ ಸಮಸ್ಯೆ ಇದೆ. ಕೇಂದ್ರಕ್ಕೆ ಪತ್ರ ಬರೆದರೂ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

ಸಚಿವ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಕೇಂದ್ರ ಶೀಘ್ರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಹಾವೇರಿಯಲ್ಲಿ ಗ್ಯಾಸ್ ಏಜೆನ್ಸಿಯಲ್ಲಿ ಕೆವೈಸಿ ಮಾಡಿಸಲು ಬಂದ ಗ್ರಾಹಕ ಹಾಗೂ ಏಜೆನ್ಸಿ ಸಿಬ್ಬಂದಿ ಗಲಾಟೆ ನಡೆದಿದೆ. ಏಜೆನ್ಸಿ ಸಿಬ್ಬಂದಿ ಮತ್ತು ಗ್ರಾಹಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದಾರೆ.

ಇನ್ನೂ, ಬೆಂಗಳೂರಿನಲ್ಲಿ ಇವತ್ತು ಕೂಡ ಆಟೋ ಗ್ಯಾಸ್‌ಗಾಗಿ ಕ್ಯೂ ನಿಂತಿರುವ ದೃಶ್ಯ ಎದ್ದು ಕಾಣುತ್ತಿತ್ತು. ಇನ್ನು ಯುದ್ಧ ನಿಲ್ಲಲಿ ಅಂತ ಉಡುಪಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಯಾಗ ಹಮ್ಮಿಕೊಳ್ಳಲಾಗಿದೆ. ವಿವಿಧ ಸಂತರು, ಸಾವಿರಾರು ಭಕ್ತರು ಪಾಲ್ಗೊಂಡು ವಿಶ್ವಶಾಂತಿಗಾಗಿ ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *