ಸುದ್ದಿ ಸಂಗ್ರಹ ಶಹಾಬಾದ
ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ವಿಶ್ವ ಭೂಮಿ ದಿನ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜ ಹಿರೇಮಠ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಾ.ಲಕ್ಷ್ಮಣ ರಾಠೋಡ, ಡಾ.ಎಚ್.ವಿ ಸೇಡಂಕರ್, ಡಾ.ಸುರೇಖಾ ನಾಟೇಕರ್, ಡಾ.ಕಾವೇರಿ, ಜ್ಯೋತಿ ಗಂಟಿಮಠ, ನಾಗರಾಜ ದೇವತ್ಕಲ್, ಸಾಯಿರಾಮ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.