ಸುದ್ದಿ ಸಂಗ್ರಹ ಶಹಾಬಾದ
ನಗರದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ಮೇ.13 ರಂದು ಸಂಜೆ 5 ಗಂಟೆಗೆ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದ ವಾಲ್ ಪೋಸ್ಟರ್ ಶನಿವಾರ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆಗೊಳಿಸಿದರು.
ಜಯಂತ್ಯೋತ್ಸವ ಸಮಿತಿಯಿಂದ ಪ್ರತಿ ವರ್ಷ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದ್ದು, ಕಲಬುರ್ಗಿಯಲ್ಲಿ ಈ ಬಾರಿಯ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತೆನೆ ಎಂದು ತಿಳಿಸಿದ್ದಾರೆ ಎಂದು ದಸಂಸ ರಾಜ್ಯ ಸಂ.ಸಂಚಾಲಕ ಮರಿಯಪ್ಪ ಹಳ್ಳಿ ಮತ್ತು ತಾಲೂಕ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ರಾಜೇಶ ಯನಗುಂಟಿಕರ ತಿಳಿಸಿದರು.
ಈ ಸಂದರ್ಭದಲ್ಲಿ ಕಾಡಾ ನಿಗಮದ ಅಧ್ಯಕ್ಷ ಡಾ.ಎಂ.ಎ ರಶೀದ, ಜಯಂತ್ಯೋತ್ಸವ ಸಮಿತಿ ಗೌರವಾಧ್ಯಕ್ಷ ವಸಂತ ಕಾಂಬಳೆ, ಪ್ರಧಾನ ಕಾರ್ಯದರ್ಶಿ ಸುಭಾಷ ಸಾಕ್ರೆ, ಮುಖಂಡರಾದ ಮಾಣಿಕ ಪಾಟೀಲ, ಹಾಷಿಮ್ ಖಾನ್, ಮಲ್ಲಣ್ಣ ಮಸ್ಕಿ, ಮಲ್ಲಿಕಾರ್ಜುನ ಕಟ್ಟಿ ಮತ್ತು ಹರೀಶ ಕರಣಿಕ ಸೇರಿದಂತೆ ಅನೇಕರು ಇದ್ದರು.