ಮುಯ್ ಥಾಯ್ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಎಎಸ್‌ಐ ಪುತ್ರ

ನಗರದ

ಸುದ್ದಿ ಸಂಗ್ರಹ ಬೆಂಗಳೂರು
ಬನಶಂಕರಿ ಸಂಚಾರ ಠಾಣೆಯ ಎಎಸ್‌ಐ ಕಾಂತರಾಜು ಅವರ ಪುತ್ರ ಶ್ರೀಹರ್ಷ ಬಿ.ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ.

ಶ್ರೀಲಂಕಾದ ನೆಗೊಂಬೋದಲ್ಲಿ ನಡೆದ ಇಂಟರ್‌ನ್ಯಾಷನಲ್ ಅಂಡ್ ಥಾಯ್ ಮಾರ್ಷಲ್ ಆರ್ಟ್ಸ್ ಏಷ್ಯನ್ ಗೇಮ್ಸ್-2026 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಶ್ರೀಹರ್ಷ, ಸ್ಪರ್ಧೆಯ 57 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಆಟಗಾರನ ವಿರುದ್ಧ ಸೋಲಿಸಿ ಅವರು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ.

ಕನಕಪುರ ಮೂಲದ ಶ್ರೀಹರ್ಷ, ಸರ್ಕಾರದ ಯಾವುದೆ ನೆರವಿಲ್ಲದೆ ಈ ಸಾಧನೆ ಮಾಡಿದ್ದಾರೆ ಎನ್ನುವುದು ವಿಶೇಷ.

ಅವರ ಸಾಧನೆಯನ್ನು ಗುರುತಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದ್ದಾರೆ.

Leave a Reply

Your email address will not be published. Required fields are marked *