ಪೋಕ್ಸೊ ಆರೋಪಿ ಪರಾರಿ ಪ್ರಕರಣ: ಅಫಜಲಪುರ ಪಿಎಸ್ಐ ಅಮಾನತು

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ಕಲಬುರಗಿ
ಪೋಕ್ಸೊ ಪ್ರಕರಣದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡ ಹೋಗಿದ್ದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಅಫಜಲಪುರ ಠಾಣೆಯ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಆದೇಶ ಹೊರಡಿಸಿದ್ದಾರೆ.

ಬಾಲಕಿಯನ್ನು ಅಪಹರಿಸಿ ಪುಣೆಗೆ ಕರೆದೊಯ್ದಿದ್ದ ಆರೋಪಿ ಮಂಜುನಾಥ ಇಂಗಳೆ (23)ಯನ್ನು ಬಂಧಿಸಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ. ಘಟನೆಯ ಬೆನ್ನಲ್ಲೆ ಅಫಜಲಪುರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರವಿದಾಸ್ ಕಟ್ಟಿಮನಿ, ಕಾನ್‌ಸ್ಟೆಬಲ್‌ಗಳಾದ ಶಿವಣ್ಣ ಮತ್ತು ಪ್ರಶಾಂತ್ ಅವರನ್ನು ಅಮಾನತುಗೊಳಿಸಲಾಗಿತ್ತು.‌

ಇದೀಗ ಪಿಎಸ್ಐ ಸೋಮಲಿಂಗ ಒಡೆಯರ್ ಅವರನ್ನು ಅಮಾನತುಗೊಳಿಸಲಾಗಿದೆ. ಸಿಪಿಐ ಲಖನ್ ಮಸಗುಪ್ಪಿ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.

ಕಾರ್ಯಾಚರಣೆ ನಡೆಸಿದ ಪೊಲೀಸರು ಪರಾರಿಯಾಗಿ ಜಮೀನಿನಲ್ಲಿ ಅವಿತುಕೊಂಡಿದ್ದ ಮಂಜುನಾಥನನ್ನು ಶುಕ್ರವಾರ ಬಂಧಿಸಿದ್ದರು.

Leave a Reply

Your email address will not be published. Required fields are marked *