ಸುದ್ದಿ ಸಂಗ್ರಹ ಬೆಂಗಳೂರು
ರಾಜಧಾನಿಯಲ್ಲಿ ಮತ್ತೆ ಕೋವಿಡ್-19 ಆತಂಕ ಎದುರಾಗಿದೆ, ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನಾಲ್ವರಿಗೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಂಧ್ರ ಪ್ರದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಬ್ಬರ ಹೆಚ್ಚುತ್ತಿದ್ದು, ಕೋವಿಡ್ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದೆ. ಇತ್ತ ರಾಜ್ಯದ ಗಡಿಭಾಗದಲ್ಲೂ ಕೊರೋನಾ ಭೀತಿ ಸೃಷ್ಟಿಯಾಗಿದೆ.
ಪಕ್ಕದ ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ಗಡಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಿದೆ. ಪಾವಗಡ ಮತ್ತು ಆಂಧ್ರದ 8 ಗಡಿ ಮಾರ್ಗಗಳಲ್ಲಿ ಕೋವಿಡ್ ತಪಾಸಣೆ ಮಾಡಲಾಗುತ್ತಿದ್ದು, ಅಗತ್ಯ ಚಿಕಿತ್ಸಾ ಕೇಂದ್ರಗಳನ್ನು ಸಹ ಈಗಾಗಲೆ ತೆರೆಯಲಾಗಿದೆ. ಈ ಮಧ್ಯೆ ರಾಜ್ಯಕ್ಕೂ ಕೊರೊನಾ ಕಾಲಿಟ್ಟಿದೆ.