ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ತಪ್ಪಿದ ಅನಾಹುತ

ಜಿಲ್ಲೆಯ

ಸುದ್ದಿ ಸಂಗ್ರಹ ಕಮಲಾಪುರ
ತಾಲೂಕಿನ ಮಹಾಗಾಂವ ಕ್ರಾಸ್ ಸಮೀಪದ ಸಿದ್ಧಭಾರತಿ ವಿದ್ಯಾಮಂದಿರ ಬಳಿ ಶುಕ್ರವಾರ ಬೆಳಿಗ್ಗೆ ಕೆಕೆಆರ್’ಟಿಸಿ ಬಸ್ ಪಲ್ಟಿಯಾಗಿದೆ.

ಬೀದರ್ ನಿಂದ ಕಲಬುರಗಿಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಂದಕಕ್ಕೆ ಉರುಳಿದೆ. ಬಸ್ ನಲ್ಲಿ ಕೇವಲ ಐವರು ಪ್ರಯಾಣಿಕರಿದ್ದರು. ಹೀಗಾಗಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ. ಚಾಲಕ ನಿರ್ವಾಹಕ ಸೇರಿದಂತೆ ಸುಮಾರು ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Leave a Reply

Your email address will not be published. Required fields are marked *