ಡಿ.9 ರಂದು ಭೀಮನಹಳ್ಳಿ ಮಂದಿರ ಉದ್ಘಾಟನೆ: ಡಾ.ಸಿದ್ಧತೋಟೇಂದ್ರ ಶ್ರೀ ಗುರುವಂದನೆ

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಾಲವಾರದ ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಗುರುವಂದನಾ ಹಾಗೂ ರಜತ ಕಿರೀಟ ಸಮರ್ಪಣಾ ಸಮಾರಂಭ ಡಿ.9 ರಂದು ಮಂಗಳವಾರ ಅದ್ಧೂರಿಯಾಗಿ ನಡೆಯಲಿದೆ ಎಂದು ಶಿವಲಿಂಗ ಕೊಳ್ಳಿ ಭೀಮನಹಳ್ಳಿ ಹೇಳಿದ್ದಾರೆ. ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಯ್ಯಾಳಲಿಂಗ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವದ ಸಾನಿಧ್ಯವಹಿಸಲಿರುವ ನಾಲವಾರ ಪೂಜ್ಯರಿಗೆ ಸಕಲ ಸದ್ಭಕ್ತರಿಂದ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ […]

Continue Reading

ಪ್ರತಿಯೊಬ್ಬರು ವಿಮೆ ಸೌಲಭ್ಯ ಪಡೆದುಕೊಳ್ಳಿ: ರವಿಗೌಡ‌

ಸುದ್ದಿ ಸಂಗ್ರಹ ಚಿತ್ತಾಪುರಬ್ಯಾoಕ್’ಗಳು ನೀಡುವ ಸೌಲಭ್ಯಗಳ ಸದುಪಯೋಗ ಜನರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಮಾರ್ಗದರ್ಶಿ (ಲೀಡ್) ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ರವಿಗೌಡ ಹೇಳಿದರು. ಸಮೀಪದ ರಾವೂರ ಗ್ರಾಮದದಲ್ಲಿ ಎಸ್’ಬಿಐ ಬ್ಯಾoಕ್ ವತಿಯಿಂದ ನಡೆದ ವಿಮೆ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಸಾವು ಸಂಭವಿಸುವದು ನಾವು ನೋಡುತ್ತೆವೆ. ಸಾವು ಅನಿರೀಕ್ಷಿತ ಇಂತಹ ಸಂದರ್ಭದಲ್ಲಿ ಬ್ಯಾoಕ್ ಖಾತೆ ತೆಗೆದು ವಿಮೆ ಮಾಡಿಸಿದ್ದರೆ ಜೀವ ಕಳೆದುಕೊಂಡ ನಾಮಿನಿ ಅವರಿಗೆ ವಿಮೆಯ ಹಣ ಬರುವುದರಿಂದ ಅವರ ಜೀವನಕ್ಕೆ ಭದ್ರತೆ ಸಿಗುತ್ತದೆ. […]

Continue Reading

ವಾಡಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಮೋದಿ ಧ್ವಜಾರೋಹಣದ ಭಕ್ತಿಯ ಸಂಭ್ರಮಾಚರಣೆ

ವಾಡಿ: ಪಟ್ಟಣದ ಸಮೀಪದ ಕೊಂಚುರಿನ ಹನುಮಾನ ದೇವಸ್ಥಾನದಲ್ಲಿ ಬಿಜೆಪಿ ಮುಖಂಡರು ಅಯೋಧ್ಯೆಯ ರಾಮಮಂದಿರದಲ್ಲಿ ಮೋದಿ ಅವರು ಐತಿಹಾಸಿಕ ಭಗವಧ್ವಜಾರೋಹಣ ನೆರವೇರಿಸಿದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕೊಂಡಿದ್ದರು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಅಯೋಧ್ಯೆಯಲ್ಲಿನ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ದಿನದಂದು ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂದಿರದ ಶಿಖರದ ಮೇಲೆ ಕೇಸರಿ ಧ್ವಜವನ್ನು ಹಾರಿಸಿ, ನಿರ್ಮಾಣ ಕಾರ್ಯದ ಪೂರ್ಣತೆಯನ್ನು ಅಧಿಕೃತವಾಗಿ ಘೋಷಿಸಿದ್ದು ನಮ್ಮೆಲ್ಲರಿಗೆ ಹೆಮ್ಮೆ ಎನಿಸುತ್ತಿದೆ. […]

Continue Reading

ಆಧ್ಯಾತ್ಮದ ಬದುಕೆ ನಿಜವಾದ ಬದುಕು: ಡಾ.ಶಾಂತಸೋಮನಾಥ ಶಿವಾಚಾರ್ಯರು

ಕಾಳಗಿ: ವರ್ತಮಾನದ ದಿನಗಳಲ್ಲಿ ಮನುಷ್ಯರುಆಧ್ಯಾತ್ಮದ ಬಾಹ್ಯ ಪ್ರಪಂಚದ ಬದುಕೆ ನಿಜವಾದ ಬದುಕು ಎಂದು ಮುಂಗಲಗಿ- ತೆಂಗಳಿಯ ಶಾಂತೇಶ್ವರ ಹಿರೇಮಠದ ಪೀಠಾಧಿಪತಿ ಡಾ.ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ತಾಲೂಕಿನ ಮಂಗಲಗಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಗುರುವಾರ ಸಂಜೆ ಕಾರ್ತಿಕ ಮಾಸದ ಚೆಟ್ಟಿ ಅಮಾವಾಸ್ಯೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಂತೇಶ್ವರ ಹಿರೇಮಠದಲ್ಲಿ ಕಳೆದ ಎರಡು ವರ್ಷದಿಂದ ಕಾರ್ತಿಕ ದೀಪೋತ್ಸವ ಆಚರಿಸಲಾಗುತ್ತಿದೆ, ಕಾರ್ತಿಕ ಮಾಸದಲ್ಲಿ ಕತ್ತಲೆ ಬಹಳ ಇರುತ್ತೆ, ಇದು ಬಹಿರಂಗದ ಕತ್ತಲೆಯಾದರೆ ಮಾನವನ ಅಂತರಂಗದಲ್ಲಿ […]

Continue Reading

ಮನಸ್ಸನ್ನು ಅರಳಿಸುವ ಶಕ್ತಿ ಸಂಗೀತಕ್ಕಿದೆ: ಡಾ.ಸಿದ್ಧತೋಟೇಂದ್ರ ಶ್ರೀ

ಚಿತ್ತಾಪುರ: ಸಂಗೀತಕ್ಕೆ ನೋವು, ದುಃಖ, ಆತಂಕ, ಖಿನ್ನತೆ ಮರೆಸುವ ಶಕ್ತಿಯಿದೆ, ಮಾನಸಿಕ ಆರೋಗ್ಯ ವೃದ್ಧಿಗೆ ಸಂಗೀತವು ಒಂದು ಸಾಧನವಾಗಿ ಕೆಲಸ ಮಾಡುತ್ತದೆ ಎಂದು ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು. ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಮಂಗಳವಾರ ರಾತ್ರಿ ಶ್ರೀಮಠದ ಸಿದ್ಧತೋಟೇಂದ್ರ ಸುವರ್ಣ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಶಿವಾನುಭವ ಚಿಂತನ ಹಾಗೂ ಸಂಗೀತೋತ್ಸವ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಚನ ಸಾಹಿತ್ಯ ದಾಸರ ಹಾಡುಗಳು, ಸರ್ವಜ್ಞರ ತ್ರಿಪದಿಗಳು, ಸ್ವರ ವಚನಗಳಿಗೆ ಭಾವಗೀತೆಗಳಿಗೆ ಸಂಗೀತ […]

Continue Reading

ವನ್ಯಜೀವಿಗಳಿಂದ ಮಾತ್ರ ಜಗದ ಉಳಿವು: ವಿಜಯಕುಮಾರ ಬಡಿಗೇರ್

ಚಿತ್ತಾಪುರ: ಜಗದ ಉಳಿವು ವನ್ಯಜೀವಿಗಳನ್ನು ಅವಲಂಬಿಸಿವೆ. ಅವುಗಳ ನಾಶವಾದರೆ ನಮಗೆ ಉಳಿಗಾಲವಿಲ್ಲ ಎಂದು ಅರಣ್ಯಾಧಿಕಾರಿ ವಿಜಯಕುಮಾರ್ ಬಡಿಗೇರ್ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ಕಲಬುರಗಿ, ಚಿತ್ತಾಪುರ ವಲಯ ಅರಣ್ಯ ವಿಭಾಗ ಮತ್ತು ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯ ವತಿಯಿಂದ ಲುoಬಿನಿ ಟ್ರಿ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರಕೃತಿ ಒಂದು ಅದ್ಭುತ ಸೃಷ್ಟಿ, ಅದರಲ್ಲಿ ಅರಣ್ಯಗಳು ಹಾಗೂ ವನ್ಯಜೀವಿಗಳ […]

Continue Reading

ರಾವೂರ: ಸೆ.21 ರಿಂದ ಸಿದ್ದಲಿಂಗ ಶ್ರೀಗಳ ಮೌನಾನುಷ್ಠಾನ

ರಾವೂರ: ನವರಾತ್ರಿ ಉತ್ಸವದ ಅಂಗವಾಗಿ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಸೆ.21 ರಿಂದ ಮೌನ ಅನುಷ್ಠಾನ ಕೈಗೊಳ್ಳಲಿದ್ದಾರೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ ತಿಳಿಸಿದ್ದಾರೆ. ಆಲೂರ ಗ್ರಾಮದ ಶಿಖರೇಶ್ವರ ದೇವಸ್ಥಾನದಲ್ಲಿ ಸೆಪ್ಟೆಂಬರ್ 21 ರಂದು ರವಿವಾರ ರಾತ್ರಿ ಮೌನ ಅನುಷ್ಠಾನ ಪ್ರಾರಂಭಿಸುವರು. ಅಕ್ಟೋಬರ್ 2 ರಂದು ದಸರಾ ಹಬ್ಬದ ದಿನ ಗುರುವಾರ ಮೌನ ಅನುಷ್ಠಾನ ಮಂಗಲವಾಗಿ ಅಂದು ಸಂಜೆ 5.30 ಕ್ಕೆ ಪೂಜ್ಯರು ರಾವೂರ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಲ್ಲಿ […]

Continue Reading

ಸೋಲು ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ಶಿವಶರಣಪ್ಪ ಮಂಠಾಳೆ

ಚಿತ್ತಾಪುರ: ಸೋಲು ಗೆಲುವಿಗಿಂತ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ತಾಲೂಕ ಧೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ಮಕ್ಕಳಲ್ಲಿ ಕ್ರೀಡಾ ಮನೋಭಾವ ಕಡಿಮೆಯಾಗುತ್ತಿದೆ. ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿ ಕಳೆದು ಹೋಗುತ್ತಿದ್ದಾರೆ. ಪಾಠಗಳ ಜೊತೆಗೆ ಆಟಗಳು ಮಕ್ಕಳ ವ್ಯಕ್ತಿತ್ವ ವಿಕಾಸಗೊಳಿಸುತ್ತವೆ ಎಂದರು. ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿಂದ ಹೆಚ್ಚಿನ […]

Continue Reading

ನಾಲವಾರ: ಆ.28 ರಂದು ಶ್ರಾವಣ ಮಾಸದ ಮುಕ್ತಾಯ ಸಮಾರಂಭ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದಲ್ಲಿ ಆಗಸ್ಟ್ 28 ರಂದು ಗುರುವಾರ ಶ್ರಾವಣ ಮಾಸದ ಮುಕ್ತಾಯ ಸಮಾರಂಭ ಅತ್ಯಂತ ಅದ್ಧೂರಿಯಾಗಿ ನೆರವೇರಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಕೆ ಗಂವ್ಹಾರ ತಿಳಿಸಿದ್ದಾರೆ. ಶ್ರಾವಣ ಮಾಸದ ಪರ್ಯಂತ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭದ ನಿಮಿತ್ಯ ಗುರುವಾರ ಮಧ್ಯಾಹ್ನ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಪುರಪ್ರವೇಶ, ಅದ್ಧೂರಿ ಶೋಭಾಯಾತ್ರೆ ಮತ್ತು ಸದ್ಗುರು ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಪಲ್ಲಕ್ಕಿ ಉತ್ಸವ ನಡೆಯಲಿದೆ. […]

Continue Reading

ಆರೋಗ್ಯ ಸಂಪತ್ತೆ ನಿಜವಾದ ಶ್ರೇಷ್ಠ ಸಂಪತ್ತು: ಸಿದ್ದಲಿಂಗ ಬಾಳಿ

ಸುದ್ದಿ ಸಂಗ್ರಹ ಚಿತ್ತಾಪುರ ಜಗತ್ತಿನಲ್ಲಿ ಎಲ್ಲಾ ಸಂಪತ್ತುಗಳಿಗಿಂತ ಆರೋಗ್ಯವೇ ನಿಜವಾದ ಶ್ರೇಷ್ಠ ಸಂಪತ್ತು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಂಪನ್ಮೂಲ ಶಿಕ್ಷಕ ಸಿದ್ದಲಿಂಗ ಬಾಳಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,‌ ನಾವು ಜೀವನದಲ್ಲಿ ಏನೆಲ್ಲಾ ಸಂಪಾದನೆ ಮಾಡಿದರೂ ಆರೋಗ್ಯ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಇಂದು ವ್ಯಸನಗಳು ಹೆಚ್ಚಾಗಿ ಜನಸಾಮಾನ್ಯರ ಬದುಕನ್ನು ಸಾವಿಗೆ ದೂಡುತ್ತಿವೆ. ದೇಶದ ಪ್ರಗತಿಗೆ […]

Continue Reading