ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಆತ್ಮವಿಶ್ವಾಸಕ್ಕೆ ಕೊರತೆಯಿದೆ: ಶಿವಾನಂದ ಖಜುರ್ಗಿ

ಚಿತ್ತಾಪುರ: ಬಹಳಷ್ಟು ಸಾಧಕರು, ಪ್ರತಿಭೆಗಳು ಗ್ರಾಮೀಣ ಭಾಗದಿಂದ ಬಂದಿದ್ದಾರೆ, ಅದರಲ್ಲೂ ಬಡತನದಿಂದ ಬಂದಿದ್ದಾರೆ ಎಂದು ದಿಶಾ ಪದವಿಪೂರ್ವ ಕಾಲೇಜಿನ ಚೇರ್ಮನ್ ಶಿವಾನಂದ ಖಜುರ್ಗಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಯಾಣದ ನಾಡಿನಲ್ಲಿ ಪ್ರತಿಭೆಗೆ ಕೊರತೆಯಿಲ್ಲ ಆದರೆ ಆತ್ಮವಿಶ್ವಾಸದ ಕೊರತೆಯಿದೆ, ಹಿಂಜರಿಕೆಯಿದೆ, ಕೀಳರಿಮೆಯಿದೆ, ಈ ಮನಸ್ಥಿತಿಯಿಂದ ಹೊರಬಂದರೆ ಖಂಡಿತ ನಮ್ಮ ಭಾಗದ ಮಕ್ಕಳು ಉತ್ತಮ ಸಾಧನೆ ಮಾಡಲು ಸಾಧ್ಯ. ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ […]

Continue Reading

ರಾವೂರ: 25 ರಿಂದ ಆ.22ರ ವರೆಗೆ ಶ್ರಾವಣ ಸತ್ಸಂಗ ಕಾರ್ಯಕ್ರಮ

ರಾವೂರ: ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಒಂದು ತಿಂಗಳ ಪರ್ಯಂತ ಶ್ರಾವಣ ಸತ್ಸಂಗ ಕಾರ್ಯಕ್ರಮ ಸಂಜೆ 7 ರಿಂದ 7.30ರ ವರೆಗೆ ನಡೆಯಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ ತಿಳಿಸಿದ್ದಾರೆ. ಜುಲೈ 25 ರಿಂದ ಆಗಸ್ಟ್ 22ರ ವರೆಗೆ ಶ್ರಾವಣ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಸತ್ಸಂಗಕ್ಕೆ ಬರುವವರು ಬಿಳಿ ಬಣ್ಣದ ಅಂಗಿ, ಬಿಳಿ ಬಣ್ಣದ ಲುಂಗಿ ಧರಿಸಿ ಬರಬೇಕು. ಸತ್ಸಂಗ ಕಾರ್ಯಕ್ರಮದಲ್ಲಿ […]

Continue Reading

ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕ ಸಿದ್ದಲಿಂಗ ಬಾಳಿ ಆಯ್ಕೆ

ಚಿತ್ತಾಪುರ: ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಶಿಕ್ಷಕ ಸಿದ್ದಲಿಂಗ ಬಾಳಿ ಅವರು ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜುಲೈ 20 ರವಿವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಲ್ಲಿ ಚೇತನ ಯೂತ್ ಫೌಂಡೇಶನ್ ವತಿಯಿಂದ ನಡೆಯುವ ರಾಷ್ಟ್ರೀಯ ಶಿಕ್ಷಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನದಲ್ಲಿ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ ಮಾಡಲಗೇರಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಬಾಳಿಯವರು ಮಾಡುತ್ತಿರುವ ವಿಭಿನ್ನ […]

Continue Reading

ರಾವೂರ: ಶಾಲಾ ಚುನಾವಣೆಯಲ್ಲಿ ಗೆದ್ದು ಬೀಗಿದ ವಿದ್ಯಾರ್ಥಿ ನಾಯಕರು

ಚಿತ್ತಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಚುನಾವಣೆ ಹಾಗೂ ಮತದಾನದ ಅರಿವು ಮೂಡಿಸಲು ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾದ ಶಾಲಾ ಸಂಸತ್ ಚುನಾವಣೆಯಲ್ಲಿ ಮಕ್ಕಳು ಗೆದ್ದು ಗೆಲುವಿನ ನಗೆ ಬೀರಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಮಕ್ಕಳ ಅಣಕು ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ಮತಯಂತ್ರದಲ್ಲಿ ಚಲಾಯಿಸಿ ತರಗತಿ ನಾಯಕರನ್ನು ಆಯ್ಕೆ ಮಾಡಿಕೊಂಡರು. ಒಟ್ಟು 10 ಮತ ಕೇಂದ್ರಗಳಲ್ಲಿ ನಡೆದ ಚುನಾವಣೆಯಲ್ಲಿ 520 ಮತದಾರರ ಪೈಕಿ 500 ಮಕ್ಕಳು ತಮ್ಮ ಮತ ಚಲಾಯಿಸಿದರು. ಶೇ.96 ರಷ್ಟು […]

Continue Reading

ಗುರುವಿನ ಸ್ಥಾನ ಎಲ್ಲದಕ್ಕಿಂತಲೂ ದೊಡ್ಡದು: ಸಿದ್ದಲಿಂಗ ಶ್ರೀ

ಚಿತ್ತಾಪುರ: ಭೂಮಿಯ ಮೇಲಿನ ಎಲ್ಲಾ ವೃತ್ತಿಗಳಲ್ಲಿ ಗುರುವಿನ ಸ್ಥಾನ ತುಂಬಾ ದೊಡ್ಡದು ಎಂದು ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುರುವಂದನಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಯಾರು ಜನರ ಅಂಧಕಾರ, ಮೌಢ್ಯತೆ ದೂರ ಮಾಡುತ್ತಾರೋ, ಯಾರು ಉತ್ತಮ ಜೀವನಕ್ಕೆ ಸೂಕ್ತ ಮಾರ್ಗದರ್ಶನ ನೀಡುವರೋ ಅವರು ನಿಜವಾದ ಗುರುಗಳು. ಶಿವಾಜಿಗೆ ಗುರು ರಾಮದಾಸರ ಮಾರ್ಗದರ್ಶನದ ಪ್ರಭಾವ ಬೀರಿತ್ತು. […]

Continue Reading

ವಚನ ಸಾಹಿತ್ಯಕ್ಕೆ ಡಾ.ಫ.ಗು ಹಳಕಟ್ಟಿ ಕೊಡುಗೆ ಅಪಾರ: ಜಗದೀಶ ಮರಪಳ್ಳಿ

ಚಿತ್ತಾಪುರ: ವಚನ ಸಾಹಿತ್ಯವನ್ನು ಇಂದು ನಾವು ಸಮಗ್ರವಾಗಿ, ವ್ಯವಸ್ಥಿತವಾಗಿ ಅಧ್ಯಯನ ಮಾಡುತ್ತಿದ್ದರೆ ಅದು ಡಾ. ಫ.ಗು. ಹಳಕಟ್ಟಿ ಅವರ ಕೊಡುಗೆ ಎಂದು ಸಾಹಿತ್ಯ ಪ್ರೇರಕ ಜಗದೀಶ ಮರಪಳ್ಳಿ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವತಿಯಿಂದ ವಚನ ಪಿತಾಮಹ ಡಾ. ಫ.ಗು ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ವಚನ ಕಂಠ ಪಾಠ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸಸಿಗೆ ನಿರುಣಿಸಿ ಉದ್ಘಾಟಿಸಿ ಮಾತನಾಡಿದ ಅವರು, ತಮ್ಮ ಜೀವನವನ್ನು […]

Continue Reading

ರಾವೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಿತ್ತಾಪುರ: ಸಮೀಪದ ರಾವೂರ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವರಾಜ್ ಸಿದ್ದರಾಮಪ್ಪ ಅಳೊಳ್ಳಿ, ಉಪಾಧ್ಯಕ್ಷರಾಗಿ ಬಸವರಾಜ್ ಹಿರಣ್ಣ ಹಾಲಿನೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ಸುರೇಶ್ ಬೆಳ್ಳಗೋಳ, ದತ್ತಾತ್ರೇಯ ಕಾಳೆಕರ್, ಭೀಮಣ್ಣ ಕೆಸಬಳ್ಳಿ, ಸಿದ್ದು ಗೋಗಿ, ಸರಸ್ವತಿ ಬಿ ಜಡಿ, ಮಲ್ಲಮ್ಮ ಯರಗಲ್, ಬಾಹುಬಲಿ ಜೈನ್, ವಿಜಯ್ ಕುಮಾರ್ ಗುದಗಲ್, ರಾಯಪ್ಪ ತಳವಾರ್ ಯರಗಲ್, ಹನುಮಂತರಾಯ ವಂತಟ್ಟಿ ಗಾಂಧಿನಗರ ಉಪಸ್ಥಿತರಿದ್ದರು. ಫಲಿತಾಂಶ ಹೊರಬೀಳುತ್ತಿದ್ದಂತೆ ರಾವೂರ ಗ್ರಾಮದ ಮುಖಂಡರು, ಕಾರ್ಯಕರ್ತರು‌ ಮತ್ತು ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆಯ್ಕೆಯಾದ […]

Continue Reading

ಯೋಗದ ಮೂಲಕ ದೇಹದ ಜೊತೆಗೆ ಮನಸ್ಸನ್ನು ಮಣಿಸೋಣ: ಸಿದ್ದಲಿಂಗ ಶ್ರೀ

ಚಿತ್ತಾಪುರ: ನಿತ್ಯ ಯೋಗ ಮಾಡುವ ಮೂಲಕ ದೇಹದ ಜೊತೆಗೆ ಮನಸ್ಸನ್ನು ಮಣಿಸೋಣ ಎಂದು ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವಿವಿಧ ಪ್ರಕಲ್ಪಗಳ ಅಡಿಯಲ್ಲಿ ನಡೆದ ವಿಶ್ವ ಯೋಗ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಮುಲ್ಯವಾದ ದೇಹವನ್ನು ನಾವುಗಳು ಒತ್ತಡದ ಜೀವನ, ಕಲುಷಿತ ಪರಿಸರ ಮತ್ತು ವಿಷಯುಕ್ತ ಆಹಾರ ಪದ್ಧತಿಯಿಂದ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದೆವೆ. ಇದೆಲ್ಲದಕ್ಕೂ ಪರಿಹಾರವೆಂದರೆ ಯೋಗ ಮಾತ್ರ. “ಯೋಗಿ ನಿರೋಗಿ” ಎನ್ನುವ ಹಾಗೆ ಯೋಗ, […]

Continue Reading

ಭಾಗೋಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶರಣಬಸಪ್ಪ ಪಾಟೀಲ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ದೊಡ್ಡಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ನಿರ್ದೇಶಕರಾದ ಸುಭಾಶ್ಚಂದ್ರ ಮುತ್ತಣ್ಣ ಶರಪೊದ್ದಿನ್ ಅಬ್ದುಲ ಹಮೀದ್, ಅಂಬಾರಾಯ ಹಣಮಂತರಾಯ, ಸಾಬಣ್ಣ ನರಸಪ್ಪ, ಇಂದುಶೇಖರ ನಾಗಣ್ಣ, ಸಿದ್ರಾಮಪ್ಪ ಕಾಮಣ್ಣ, ದೇವಿಂದ್ರ ಮೈಲಾರಿ, ವಿಶ್ವನಾಥ ರುದ್ರಪ್ಪ, ಶರಣಮ್ಮ ವಿಶ್ವೇಶ್ವರ, ಲಕ್ಷ್ಮೀಬಾಯಿಸಿದ್ರಾಮಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜಪಾಟೀಲ (ದಳಪತಿ), ಪ್ರದೀಪ ಪೂಜಾರಿ ಕದ್ದರಗಿ, ಅರುಣಯಾಗಾಪೂರ, ಮದನ ಯಾಗಾಪೂರ ಸೇರಿದಂತೆಅನೇಕರು ಉಪಸ್ಥಿತರಿದ್ದರು. […]

Continue Reading

ತೆಂಗಳಿ ಗ್ರಾ.ಪಂ ಅವ್ಯವಹಾರ: ಬಿಲ್ ಕಲೆಕ್ಟರ್ ಅಮಾನತು

ಕಾಳಗಿ: ತಾಲೂಕಿನ ತೆಂಗಳಿ ಗ್ರಾಮ ಪಂಚಾಯತಿಯ ಒಟ್ಟು 19 ಸದಸ್ಯರ ಗೌರವ ಧನದ 19 ಚೇಕ್ ಗಳನ್ನು ತನ್ನ ಹೆಸರಿಗೆ ಡ್ರಾ ಮಾಡಿಕೊಂಡ ಆರೋಪದಡಿ ತೆಂಗಳಿ ಗ್ರಾ.ಪಂ ಬಿಲ್ ಕಲೆಕ್ಟರ್ ಮಲ್ಲಿಕಾರ್ಜುನ ಶಾಮರಾವ ತಳವಾರ ಅವರನ್ನು‌ ಕರ್ನಾಟಕ ಗ್ರಾಮ ಸ್ವರಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಆದೇಶದ ಮೇರೆಗೆ ಗ್ರಾ.ಪಂ ಅಧ್ಯಕ್ಷರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗ್ರಾ.ಪಂ ಹಿಂದಿನ ಅಧ್ಯಕ್ಷೆ ಸುಮಿತ್ರಾ ಚೌವ್ಹಾಣ ದೂರು ನೀಡಿದ ಹಿನ್ನೆಲೆಯಲ್ಲಿ ಈ ಸಿಬ್ಬಂದಿಯನ್ನು ಇಲಾಖೆ ವಿಚಾರಣೆಗೆ ಒಳಪಡಿಸಲಾಗಿತ್ತು, ಪಂಚಾಯತಿ […]

Continue Reading