ರಾವೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಿತ್ತಾಪುರ: ಸಮೀಪದ ರಾವೂರ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವರಾಜ್ ಸಿದ್ದರಾಮಪ್ಪ ಅಳೊಳ್ಳಿ, ಉಪಾಧ್ಯಕ್ಷರಾಗಿ ಬಸವರಾಜ್ ಹಿರಣ್ಣ ಹಾಲಿನೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ಸುರೇಶ್ ಬೆಳ್ಳಗೋಳ, ದತ್ತಾತ್ರೇಯ ಕಾಳೆಕರ್, ಭೀಮಣ್ಣ ಕೆಸಬಳ್ಳಿ, ಸಿದ್ದು ಗೋಗಿ, ಸರಸ್ವತಿ ಬಿ ಜಡಿ, ಮಲ್ಲಮ್ಮ ಯರಗಲ್, ಬಾಹುಬಲಿ ಜೈನ್, ವಿಜಯ್ ಕುಮಾರ್ ಗುದಗಲ್, ರಾಯಪ್ಪ ತಳವಾರ್ ಯರಗಲ್, ಹನುಮಂತರಾಯ ವಂತಟ್ಟಿ ಗಾಂಧಿನಗರ ಉಪಸ್ಥಿತರಿದ್ದರು. ಫಲಿತಾಂಶ ಹೊರಬೀಳುತ್ತಿದ್ದಂತೆ ರಾವೂರ ಗ್ರಾಮದ ಮುಖಂಡರು, ಕಾರ್ಯಕರ್ತರು‌ ಮತ್ತು ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆಯ್ಕೆಯಾದ […]

Continue Reading

ಯೋಗದ ಮೂಲಕ ದೇಹದ ಜೊತೆಗೆ ಮನಸ್ಸನ್ನು ಮಣಿಸೋಣ: ಸಿದ್ದಲಿಂಗ ಶ್ರೀ

ಚಿತ್ತಾಪುರ: ನಿತ್ಯ ಯೋಗ ಮಾಡುವ ಮೂಲಕ ದೇಹದ ಜೊತೆಗೆ ಮನಸ್ಸನ್ನು ಮಣಿಸೋಣ ಎಂದು ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವಿವಿಧ ಪ್ರಕಲ್ಪಗಳ ಅಡಿಯಲ್ಲಿ ನಡೆದ ವಿಶ್ವ ಯೋಗ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಮುಲ್ಯವಾದ ದೇಹವನ್ನು ನಾವುಗಳು ಒತ್ತಡದ ಜೀವನ, ಕಲುಷಿತ ಪರಿಸರ ಮತ್ತು ವಿಷಯುಕ್ತ ಆಹಾರ ಪದ್ಧತಿಯಿಂದ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದೆವೆ. ಇದೆಲ್ಲದಕ್ಕೂ ಪರಿಹಾರವೆಂದರೆ ಯೋಗ ಮಾತ್ರ. “ಯೋಗಿ ನಿರೋಗಿ” ಎನ್ನುವ ಹಾಗೆ ಯೋಗ, […]

Continue Reading

ಭಾಗೋಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶರಣಬಸಪ್ಪ ಪಾಟೀಲ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ದೊಡ್ಡಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ನಿರ್ದೇಶಕರಾದ ಸುಭಾಶ್ಚಂದ್ರ ಮುತ್ತಣ್ಣ ಶರಪೊದ್ದಿನ್ ಅಬ್ದುಲ ಹಮೀದ್, ಅಂಬಾರಾಯ ಹಣಮಂತರಾಯ, ಸಾಬಣ್ಣ ನರಸಪ್ಪ, ಇಂದುಶೇಖರ ನಾಗಣ್ಣ, ಸಿದ್ರಾಮಪ್ಪ ಕಾಮಣ್ಣ, ದೇವಿಂದ್ರ ಮೈಲಾರಿ, ವಿಶ್ವನಾಥ ರುದ್ರಪ್ಪ, ಶರಣಮ್ಮ ವಿಶ್ವೇಶ್ವರ, ಲಕ್ಷ್ಮೀಬಾಯಿಸಿದ್ರಾಮಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜಪಾಟೀಲ (ದಳಪತಿ), ಪ್ರದೀಪ ಪೂಜಾರಿ ಕದ್ದರಗಿ, ಅರುಣಯಾಗಾಪೂರ, ಮದನ ಯಾಗಾಪೂರ ಸೇರಿದಂತೆಅನೇಕರು ಉಪಸ್ಥಿತರಿದ್ದರು. […]

Continue Reading

ತೆಂಗಳಿ ಗ್ರಾ.ಪಂ ಅವ್ಯವಹಾರ: ಬಿಲ್ ಕಲೆಕ್ಟರ್ ಅಮಾನತು

ಕಾಳಗಿ: ತಾಲೂಕಿನ ತೆಂಗಳಿ ಗ್ರಾಮ ಪಂಚಾಯತಿಯ ಒಟ್ಟು 19 ಸದಸ್ಯರ ಗೌರವ ಧನದ 19 ಚೇಕ್ ಗಳನ್ನು ತನ್ನ ಹೆಸರಿಗೆ ಡ್ರಾ ಮಾಡಿಕೊಂಡ ಆರೋಪದಡಿ ತೆಂಗಳಿ ಗ್ರಾ.ಪಂ ಬಿಲ್ ಕಲೆಕ್ಟರ್ ಮಲ್ಲಿಕಾರ್ಜುನ ಶಾಮರಾವ ತಳವಾರ ಅವರನ್ನು‌ ಕರ್ನಾಟಕ ಗ್ರಾಮ ಸ್ವರಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಆದೇಶದ ಮೇರೆಗೆ ಗ್ರಾ.ಪಂ ಅಧ್ಯಕ್ಷರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಗ್ರಾ.ಪಂ ಹಿಂದಿನ ಅಧ್ಯಕ್ಷೆ ಸುಮಿತ್ರಾ ಚೌವ್ಹಾಣ ದೂರು ನೀಡಿದ ಹಿನ್ನೆಲೆಯಲ್ಲಿ ಈ ಸಿಬ್ಬಂದಿಯನ್ನು ಇಲಾಖೆ ವಿಚಾರಣೆಗೆ ಒಳಪಡಿಸಲಾಗಿತ್ತು, ಪಂಚಾಯತಿ […]

Continue Reading

ಬಸವೇಶ್ವರ ಮೂರ್ತಿಯ ಜೊತೆಗೆ ತತ್ವವೂ ಎಲ್ಲೆಡೆ ಪಸರಿಸಲಿ: ಬಸವರಾಜ ಪಾಟೀಲ್ ಸೇಡಂ

ಚಿತ್ತಾಪುರ: ವಿಶ್ವಗುರು ಬಸವೇಶ್ವರ ಮೂರ್ತಿಯ ಜೊತೆಗೆ ತತ್ವ ಸಿದ್ಧಾಂತಗಳು ಎಲ್ಲೆಡೆ ಪಸರಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕಿದೆ ಎಂದು ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಗುರು ಬಸವೇಶ್ವರರ 892ನೇ ಜಯಂತ್ಯೋತ್ಸವ ಹಾಗೂ ಬಸವೇಶ್ವರ ಮೂರ್ತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾವೂರ ಗ್ರಾಮದಲ್ಲಿ ಮೂರ್ತಿ ಅನಾವರಣ ಮಾಡಿದ್ದು ಖುಷಿಯ ಸಂಗತಿ. ಆದರ ಜೊತೆಗೆ ಮೂರ್ತಿ ಅನಾವರಣ ಸಮಿತಿಯವರು ನಿತ್ಯವೂ ಈ ಮೂರ್ತಿಯ ಪರಿಸರ ಸ್ವಚ್ಛವಾಗಿಟ್ಟು ಪೂಜೆ ಮಾಡಬೇಕು. ಮಕ್ಕಳಿಗಾಗಿ […]

Continue Reading

ಭಾಗೋಡಿ ಪಿಕೆಪಿಎಸ್‌ ಸಂಘಕ್ಕೆ 12 ನಿರ್ದೇಶಕರ ಅವಿರೋಧ ಆಯ್ಕೆ

ಚಿತ್ತಾಪುರ: ತಾಲೂಕಿನ ಭಾಗೋಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಸುಭಾಶಚಂದ್ರ ಮುತ್ತಣ್ಣ ಭಾಗೋಡಿ (ಸಾಮಾನ್ಯ), ಶರ್ಮೋದ್ದೀನ್ ಅಬ್ದುಲ್ ಹಮೀದ್ ಭಾಗೋಡಿ (ಸಾಮಾನ್ಯ), ಅಂಬರಾಯ ಹನುಮಂತಪ್ಪ ಕದ್ದರಗಿ (ಸಾಮಾನ್ಯ), ಸಾಬಣ್ಣ ನರಸಪ್ಪ ಭಾಗೋಡಿ (ಸಾಮಾನ್ಯ), ಇಂದುಶೇಖರ ನಾಗಣ್ಣ ಭಾಗೋಡಿ (ಸಾಮಾನ್ಯ), ಶರಣಬಸಪ್ಪ ಪಾಟೀಲ ಶಿವಲಿಂಗಪ್ಪ ಪಾಟೀಲ ಭಾಗೋಡಿ (ಸಾಲಗಾರರಲ್ಲದ ಸಾಮಾನ್ಯ), ಮಲ್ಲಿಕಾರ್ಜುನ ಬಸವರಾಜ ಭಾಗೋಡಿ (ಪರಿಶಿಷ್ಟ ಜಾತಿ), ಸಿದ್ರಾಮಪ್ಪ ಕಾಮಣ್ಣ ಕಾಟಮ್ಮದೇವರಹಳ್ಳಿ (ಪರಿಶಿಷ್ಟ ಪಂಗಡ), […]

Continue Reading

ಏ.27 ರಂದು ನಾಲವಾರದಲ್ಲಿ ಹಳೆಯ ಜಾತ್ರೆ, ಸದ್ಭಕ್ತರ ಹರಕೆಯ ತನಾರತಿ ಉತ್ಸವ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಏ. 27 ರಂದು ರವಿವಾರ ಪೀಠಾಧಿಪತಿ ಪೂಜ್ಯಶ್ರೀ ಡಾ. ಸಿದ್ದತೋಟೆಂದ್ರ ಮಹಾಸ್ವಾಮಿಗಳ ದಿವ್ಯ ಸನ್ನಿಧಿಯಲ್ಲಿ ಶ್ರೀಮಠದ ಹಳೆಯ ಜಾತ್ರೆ ಹಾಗೂ ಪ್ರಸಕ್ತ ವರ್ಷದ ಎರಡನೆಯ ತನಾರತಿ ಉತ್ಸವ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಅಕ್ಷಯತದಿಗೆ ಅಮಾವಾಸ್ಯಯ ದಿನ ಬೆಳಿಗ್ಗೆ ಕರ್ತೃ ಗದ್ದುಗೆಗೆ ವಿಶೇಷ ಪೂಜೆ, ರುದ್ರಾಭಿಷೇಕ ನಡೆಯಲಿದೆ, ಸಂಜೆ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ, ನಾಡಿನ ಹಲವು […]

Continue Reading

ಸಿದ್ದಲಿಂಗ ಮಹಾಸ್ವಾಮಿಗಳ ಜನ್ಮದಿನದ ಪ್ರಯುಕ್ತ ಉಚಿತ ಕ್ಷೌರ ಸೇವೆ

ಚಿತ್ತಾಪುರ: ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳ 33ನೇ ಜನ್ಮದಿನದ ಪ್ರಯುಕ್ತ ರಾವೂರನ ಬಾಳಿ ಕಾಂಪ್ಲೆಕ್ಸ್’ನಲ್ಲಿನ ಗುರು ಮೆನ್ಸ್ ಪಾರ್ಲರ್ ವತಿಯಿಂದ ಉಚಿತ ಕ್ಷೌರ ಸೇವೆ ಮಾಡಲಾಯಿತು. ಎರಡು ವರ್ಷಗಳಿಂದ ತಮ್ಮ ವೃತ್ತಿಯಲ್ಲಿ ದುಡಿಯುತ್ತಾ ಪೂಜ್ಯರ ಜನ್ಮದಿನದ ಪ್ರಯುಕ್ತ ಎರಡನೇ ವರ್ಷ ಒಂದು ದಿನ ಸಾರ್ವಜನಿಕರಿಗೆ ಉಚಿತ ಕ್ಷೌರ ಸೇವೆ ಮಾಡುವ ಸಂಕಲ್ಪದೊಂದಿಗೆ ಮಹಾದೇವ ವಡಗೇರಿ, ಅಂಬರೀಷ್ ವಡಗೇರಿ, ಶರಣು ವಡಗೇರಿ, ಭಾಗಣ್ಣ ವಡಗೇರಿ ಮತ್ತು ಗಂಗಾಧರ ವಡಗೇರಿಯವರು ಇಂತಹ ಸತ್ಕಾರ್ಯ […]

Continue Reading

ಸಿದ್ದಲಿಂಗೇಶ್ವರ ಸಂಸ್ಥಾನ ಮಠದಿಂದ ಶಿಕ್ಷಣ ಕ್ರಾಂತಿ: ಮಾತೋಶ್ರೀ ಡಾ.ದಾಕ್ಷಾಯಣಿ ಎಸ್ ಅಪ್ಪ

ಚಿತ್ತಾಪುರ: ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಾ ಕಳೆದ 42 ವರ್ಷಗಳಿಂದ ಈ ಭಾಗದ ಜನರ ಆಶಾಕಿರಣವಾಗಿರುವ ಶ್ರೀ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆಯು ಶಿಕ್ಷಣ ಕ್ರಾಂತಿ ಮಾಡುತ್ತಿದೆ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಚೇರ್ಪರ್ಸನ್ ಡಾ. ದಾಕ್ಷಾಯಣಿ ಶರಣಬಸಪ್ಪ ಅಪ್ಪ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಸಿದ್ದಲಿಂಗೇಶ್ವರ ವಸತಿ ನಿಲಯ ಮತ್ತು ಪಾಕಶಾಲೆಯ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿ ಅವರು, ಸಿದ್ದಲಿಂಗೇಶ್ವರ ತ್ರಿವಿಧ ದಾಸೋಹದ ಮೂಲಕ ಈ ಭಾಗದಲ್ಲಿ ಉತ್ತಮ ಸೇವೆ […]

Continue Reading

ದಾಸೋಹ ಮೂರ್ತಿ ಶರಣಬಸವೇಶ್ವರ ಅದ್ಧೂರಿ ರಥೋತ್ಸವ

ಕಾಳಗಿ: ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಏಪ್ರಿಲ್ 18 ರಂದು ಸಾಯಂಕಾಲ 6 ಗಂಟೆಗೆ ಶರಣಬಸವೇಶ್ವರ ರಥೋತ್ಸವವು ಸಹಸ್ರಾರು ಭಕ್ತರ ಜಯ ಘೋಷಣೆಗಳ ಮಧ್ಯೆ ನಡೆಯಿತು. ಗ್ರಾಮದ ಶಾಂತೇಶ್ವರ ಹಿರೇಮಠದ ಡಾ.ಶಾಂತಸೋಮನಾಥ ಶಿವಾಚಾರ್ಯರು ಸಾನಿಧ್ಯ ವಹಿಸಿದ್ದರು. ಭಕ್ತರು ಉತ್ತತ್ತಿ, ಖಾರಿಕ್ ಮತ್ತು ಬಾಳೆ ಹಣ್ಣು ರಥಕ್ಕೆ ಎಸೆದು ಭಕ್ತಿ ಅರ್ಪಿಸಿದರು. ರಾತ್ರಿ ವರ್ಣರಂಜಿತ ಸಿಡಿಮದ್ದು ಸುಡುವ ಕಾರ್ಯಕ್ರಮ ನಡೆಯಿತು. ಏ.17 ರಂದು ರಾತ್ರಿ 8 ಗಂಟೆಗೆ ಪಂಚಲಿಂಗೇಶ್ವರ ದೇವಸ್ಥಾನದಿಂದ ಪಲ್ಲಕ್ಕಿ ಮೆರವಣಿಗೆ ಹಾಗೂ ಖ್ಯಾತ ಮಣಿ ಡ್ರಮ್, ಕೆರಳ […]

Continue Reading